News Karnataka Kannada
Friday, May 03 2024
ಬೆಂಗಳೂರು

ಭೋವಿ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿಗೆ ಮನವಿ

Bhovi Swamiji 24082021
Photo Credit :

ಬೆಂಗಳೂರು: ಭೋವಿ ಸಮುದಾಯಕ್ಕೆ ಸೇರಿದವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸ್ವಾಮೀಜಿ, ಭೋವಿ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ಬಗ್ಗೆ ಮನವರಿಕೆ ಮಾಡಿದರು. ಭೋಮಿ ಅಭಿವೃದ್ಧಿ ನಿಗಮಕ್ಕೆ ಮೂರು ವರ್ಷ ಕಳೆದರೂ ಅಧ್ಯಕ್ಷರ ನೇಮಕ ಮಾಡಿಲ್ಲ. ಪ್ರಾದೇಶಿಕ ನ್ಯಾಯದಡಿ ಕಲಬುರ್ಗಿ, ಬೆಳಗಾವಿ, ಮೈಸೂರು ಮತ್ತು ಮಧ್ಯ ಕರ್ನಾಟಕದಲ್ಲಿ ಕಚೇರಿಗಳನ್ನು ಆರಂಭಿಸುವುದರೊಳಗೆ ನಿರ್ದೇಶಕರನ್ನು ನೇಮಕ ಮಾಡಿ ಅಧ್ಯಕ್ಷರನ್ನು ಆಯ್ಕೆ ಮಾಡುವುದರೊಂದಿಗೆ ₹500 ಕೋಟಿ ಬಿಡುಗಡೆ ಮಾಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.

ಭೋವಿ ವಡ್ಡರಲ್ಲದವರು ಅನುದಾನ ಪಡೆಯುವುದನ್ನು ತಡೆಯುವ ದೃಷ್ಟಿಯಿಂದ ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ ವಡ್ಡರ ಅಭಿವೃದ್ಧಿ ನಿಗಮ ಎಂದು ಮರುನಾಮಕರಣ ಮಾಡಬೇಕು.ಭೋವಿ ಗುರುಪೀಠದಲ್ಲಿ ಭೋವಿ ಜನಾಂಗದ ಸಂಸ್ಕೃತಿ ಮತ್ತು ಸಂಶೋಧನಾ ಕೇಂದ್ರ ಸ್ಥಾಪನೆ, ಭೋವಿ ನಿಗಮದಿಂದ ಕಟ್ಟಡ, ಕಲ್ಲುಕ್ವಾರೆ, ರಸ್ತೆ ಚರಂಡಿ, ಅರೆ ಅಲೆಮಾರಿ ಮತ್ತು ಭೂರಹಿತ ಭೋವಿ ವಡ್ಡರ ಕಾರ್ಮಿಕ ಸಮೀಕ್ಷೆ ನಡೆಸಿ ವಿಶೇಷ ಗುರುತಿಚ ಚೀಟು ವಿತರಿಸಬೇಕು ಎಂದು ಸ್ವಾಮೀಜಿ ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು