News Karnataka Kannada
Saturday, April 27 2024
ಬೆಂಗಳೂರು

ಮನಸ್ಸಿನ ಕಹಿ ಹೊರಹಾಕಿ ಈ ರೀತಿಯೂ ಕ್ಷಮೆ ಕೇಳಬಹುದು ಎನ್ನುವುದು ಈಗ ಗೊತ್ತಾಯ್ತು: ಸುರೇಶ್ ಕುಮಾರ್

Suresh Kumar 12 7 21
Photo Credit :

ಮನಸ್ಸಿನ ಕಹಿ ಹೊರಹಾಕಿ ಈ ರೀತಿಯೂ ಕ್ಷಮೆ ಕೇಳಬಹುದು ಎನ್ನುವುದು ಇಂದು ಗೊತ್ತಾಯಿತು ಎಂದು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಸಂಗೀತ ನಿರ್ದೇಶಕ ಹಂಸಲೇಖರ ಕ್ಷಮೆಗೆ ತಿರುಗೇಟು ನೀಡಿದ್ದಾರೆ.

ಈ ಕುರಿತಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ಹಂಸಲೇಖರಿಗೆ ಬೇಷರತ್ತಾಗಿ ಕ್ಷಮೆ ಕೇಳುವ ದೊಡ್ಡ ಗುಣವೂ ಇಲ್ಲ. ಎದುರಿಗಿನ ಜನ ಚಪ್ಪಾಳೆ ತಟ್ಟುತ್ತಾರೆ & ಶಿಳ್ಳೆ ಹಾಕುತ್ತಾರೆ ಎಂದು ಸಂದರ್ಭ ಪ್ರಜ್ಞೆ, ಸಭಾ ಪ್ರಜ್ಞೆ ಕಳೆದುಕೊಂಡು ಅನಗತ್ಯವಾಗಿ ಏನೆಲ್ಲಾ ಹೇಳಿಬಿಟ್ಟ ಮೇಲೆ ‘ಕ್ಷಮೆ, ಕ್ಷಮೆ’ ಎಂದು ಕೇಳುವುದೂ ಸಂಗೀತ ನಿರ್ದೇಶಕರು ಹೊರಹೊಮ್ಮಿಸಿರುವ ಕೆಟ್ಟ ಅಪಸ್ವರ ಎಂದು ವಿವರಿಸಿದ್ದಾರೆ.

ಎದುರಿಗೆ ಚಪ್ಪಾಳೆ ತಟ್ಟುವ ಜನರಿಗಿಂತ, ತನ್ನ ಚುಚ್ಚು ಮಾತುಗಳಿಂದ ಘಾಸಿಯಾಗುವ ಅಪಾರ ಸಂಖ್ಯೆಯ ಜನರ ಭಾವನೆ ಇಷ್ಟು ವರ್ಷ ಸಾರ್ವಜನಿಕ ಜೀವನ ನೋಡಿರುವವರಿಗೆ ಅರ್ಥವಾಗಬೇಕಿತ್ತು. ಈಗ ಕ್ಷಮೆ ಕೇಳೋ ವಿಡಿಯೋದಲ್ಲೂ ‘ಕೆಲವೊಂದು ಮಾತುಗಳು ವೇದಿಕೆಗಲ್ಲ’ ಅಂದಿದ್ದಾರೆ.

ಅಂತಹ ಮಾತುಗಳು ವೇದಿಕೆಗಲ್ಲ, ಮನಸ್ಸಲ್ಲಿದ್ದರೂ ವಿಷ ಅನ್ನೋದು ಇಷ್ಟು ವಯಸ್ಸಿನ ಹಿರಿಯರಾದವರಿಗೆ, ಇಷ್ಟೊಂದು ಅನುಭವ ಇರುವವರಿಗೆ ಗೊತ್ತಿಲ್ಲವೆ? ಇವರ ಅರ್ಥಹೀನ ಮಾತಿನಿಂದ ಪೇಜಾವರ ಶ್ರೀಗಳ ಶ್ರೇಷ್ಠ ವ್ಯಕ್ತಿತ್ವಕ್ಕೆ ಏನೂ ಕುಂದಾಗುವುದಿಲ್ಲ. ರಾಗ ತಪ್ಪಿದವರ, ವಿವೇಚನೆಯ ತಾಳ ಕಳೆದುಕೊಂಡವರ ತೂಕ ಕಡಿಮೆಯಾಯಿತು ಅಷ್ಟೇ! ಏನೇ ಆಗಲಿ. ಅವರಿಗೆ ತಿಳುವಳಿಕೆ ನೀಡಿರುವ ಅವರ ಧರ್ಮಪತ್ನಿ ಯವರಿಗೆ ನನ್ನ ಅಭಿನಂದನೆಗಳು ಎಂದು ಹಂಸಲೇಖರವರ ಪತ್ನಿಗೆ ಅಭಿನಂದಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು