News Karnataka Kannada
Tuesday, April 30 2024
ಬೆಂಗಳೂರು

ಮಲಗಿದ್ದ ಶ್ವಾನದ ಮೇಲೆ ಕಾರು ಹತ್ತಿಸಿದ ಅಮಾನವೀಯ ಕೃತ್ಯ: ಕ್ರಮಕ್ಕೆ ಒತ್ತಾಯ

Child sleeping next to mother dies after being attacked by stray dogs
Photo Credit :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಕೃತ್ಯವೆಸಗಿದ್ದು, ಶ್ವಾನ ಲಾರಾ ಪ್ರಕರಣದ ಬೆನ್ನಲ್ಲೇ ಮತ್ತೊಂದು ದೌರ್ಜನ್ಯ ನಡೆದಿದೆ. ಕಿಡಿಗೇಡಿಯು ಮಲಗಿದ್ದ ಮತ್ತೊಂದು ಬೀದಿ ನಾಯಿ ಮೇಲೆ ಕಾರ್ ಹತ್ತಿಸಿದ್ದಾರೆ. ಪ್ರಾಣಿಗಳ ಮೇಲಿನ ದೌರ್ಜನ್ಯ ಪದೇ ಪದೇ ಮರುಕಳಿಸುತ್ತಿದೆ.

ಈ ಅಮಾನವೀಯ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜಯನಗರದ 9th ಬ್ಲಾಕ್‌ನಲ್ಲಿ ಘಟನೆ ನಡೆದಿದ್ದು, ಕಾರ್ ಹತ್ತಿಸಿದ ಕಾರಣ ಸ್ಥಳದಲ್ಲೇ ಶ್ವಾನ ನರಳಾಡಿ ಸಾವನ್ನಪ್ಪಿದೆ. ಈ ಪ್ರಕರಣದ ಕುರಿತು ಶ್ವಾನಪ್ರಿಯರಾದ ನಾಗರಾಜ್, ಹಾಗೂ ಬದ್ರೀ ಪ್ರಸಾದ್‌ ಅವರು ಜಯನಗರ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಿದ್ದಾರೆ. ಕಾರ್‌ ಹತ್ತಿಸಿರೋದು ಯಾರೆಂದು ತಿಳಿದುಬಂದಿಲ್ಲ. ಶ್ವಾನಪ್ರಿಯರು ಮೃತ ಶ್ವಾನದ ಅಂತ್ಯಕ್ರಿಯೆ ನಡೆಸಿದ್ದಾರೆ. ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು