ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಕೃತ್ಯವೆಸಗಿದ್ದು, ಶ್ವಾನ ಲಾರಾ ಪ್ರಕರಣದ ಬೆನ್ನಲ್ಲೇ ಮತ್ತೊಂದು ದೌರ್ಜನ್ಯ ನಡೆದಿದೆ. ಕಿಡಿಗೇಡಿಯು ಮಲಗಿದ್ದ ಮತ್ತೊಂದು ಬೀದಿ ನಾಯಿ ಮೇಲೆ ಕಾರ್ ಹತ್ತಿಸಿದ್ದಾರೆ. ಪ್ರಾಣಿಗಳ ಮೇಲಿನ ದೌರ್ಜನ್ಯ ಪದೇ ಪದೇ ಮರುಕಳಿಸುತ್ತಿದೆ.
ಈ ಅಮಾನವೀಯ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜಯನಗರದ 9th ಬ್ಲಾಕ್ನಲ್ಲಿ ಘಟನೆ ನಡೆದಿದ್ದು, ಕಾರ್ ಹತ್ತಿಸಿದ ಕಾರಣ ಸ್ಥಳದಲ್ಲೇ ಶ್ವಾನ ನರಳಾಡಿ ಸಾವನ್ನಪ್ಪಿದೆ. ಈ ಪ್ರಕರಣದ ಕುರಿತು ಶ್ವಾನಪ್ರಿಯರಾದ ನಾಗರಾಜ್, ಹಾಗೂ ಬದ್ರೀ ಪ್ರಸಾದ್ ಅವರು ಜಯನಗರ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಿದ್ದಾರೆ. ಕಾರ್ ಹತ್ತಿಸಿರೋದು ಯಾರೆಂದು ತಿಳಿದುಬಂದಿಲ್ಲ. ಶ್ವಾನಪ್ರಿಯರು ಮೃತ ಶ್ವಾನದ ಅಂತ್ಯಕ್ರಿಯೆ ನಡೆಸಿದ್ದಾರೆ. ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ.