News Karnataka Kannada
Monday, May 13 2024
ಬೆಂಗಳೂರು

ಮಾನಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

77th in dependence
Photo Credit : News Kannada

ಬೆಂಗಳೂರು: ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 77 ವರ್ಷ ತುಂಬಿದೆ. ಇಂದು ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ‘ವಸಾಹತುವಾದ ಮತ್ತು ಸಾಮ್ರಾಜ್ಯವಾದಗಳು ಜೀವಂತವಾಗಿದ್ದಾಗ, ಸ್ವಾತಂತ್ರ್ಯ ಗಳಿಸಿದರೆ ಸಾಕು ಅಭಿವೃದ್ಧಿ ಎಂಬುದು ತನ್ನಿಂದ ತಾನೆ ಸಾಧ್ಯವಾಗುತ್ತದೆ ಎಂದು ಭಾವಿಸಿ ನಮ್ಮ ಹಿರಿಯರು ಹೋರಾಟ ಮಾಡಿದ್ದರು. ಇದು ಸತ್ಯ ಕೂಡ ಆಗಿತ್ತು. ಸ್ವಾತಂತ್ರ್ಯವೇನೊ ಲಭಿಸಿತು. ಆದರೆ ನವ ಉದಾರವಾದಿ ನೀತಿಗಳು ಜಗತ್ತಿನಾದ್ಯಂತ ಪ್ರಾರಂಭವಾದ ಮೇಲೆ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಾ ಹೋಯಿತು. ಇಂದು ನಮ್ಮಲಿಯೇ ಶೇ.10 ರಷ್ಟು ಜನ ಶೇ.78 ಕ್ಕಿಂತ ಹೆಚ್ಚಿನ ಪ್ರಮಾಣದ ಸಂಪತ್ತಿನ ಮೇಲೆ ಯಜಮಾನಿಕೆ ಹೊಂದಿದ್ದಾರೆ. ಬ್ರಿಟಿಷ್ ಭಾರತದಲ್ಲಿ ನಮ್ಮ ದೇಶದ ಸಂಪತ್ತನ್ನು ಬ್ರಿಟಿಷರು ಹೊತ್ತೊಯ್ದರು. ಆದರೆ ಇಂದು ನಮ್ಮಲ್ಲಿ ಕೆಲವೇ ದೊಡ್ಡ ಬಂಡವಾಳಿಗರ ಬಳಿ ಶೇಖರಣೆಗೊಳ್ಳುತ್ತಿದೆ. ಈ ರೀತಿಯಾದರೆ ಅಭಿವೃದ್ಧಿ ಸಾಧ್ಯವೆ? ಕುವೆಂಪು ಅವರು ತಮ್ಮದೊಂದು ಪದ್ಯದಲ್ಲಿದೆ’ ಎಂದು ಹೇಳಿದರು.

ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು ಎಂದರು.

ಇನ್ನು ಮಾನಿಕ್ ಷಾ ಪೆರೇಡ್ ಗ್ರೌಂಡ್ ನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಆಗಮಿಸುವ ಹಿನ್ನಲೆ ಪೊಲೀಸರು ಮೈದಾನದ ಸುತ್ತ ಹದ್ದಿನ ಕಣ್ ಇಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರು ಎರಡು ರೀತಿಯಲ್ಲಿ ಅಗತ್ಯ ತಯಾರಿ ಮಾಡಿಕೊಂಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು