ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿರುವ ಗುಂಡಿಗಳಿಂದ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇನ್ನು 10 ದಿನಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಕಂದಾಯ ಸಚಿವ ಆರ್. ಅಶೋಕ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದಲ್ಲಿ ಸುಮಾರು 13,874 ಕಿ.ಮೀ ರಸ್ತೆಗಳಿವೆ. 134 ಪ್ರಮುಖ ರಸ್ತೆ ಮತ್ತು ಒಳ ರಸ್ತೆಗಳಿದೆ. 895 ಕಿಮೀ ರಸ್ತೆ ಸುಸ್ಥಿತಿಯಲ್ಲಿದ್ದು, ಈ ಪೈಕಿ 449 ಕಿಮೀ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಸದ್ಯ 246 ಕಿಮೀ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ.
ರಸ್ತೆ ಗುಂಡಿ ಮುಚ್ಚಲು ಜಲ್ಲಿ ಮಿಕ್ಸ್ಬೇಕಿದೆ. ಆದರೆ ಮಳೆ ಕಾರಣದಿಂದ ಜಲ್ಲಿ ಮಿಕ್ಸ್ ಸಪ್ಲೇ ಆಗುತ್ತಿಲ್ಲ. ಈ ಕಾರಣದಿಂದ ಗುಂಡಿಗಳನ್ನು ಮುಚ್ಚಲು ಆಗುತ್ತಿಲ್ಲ. ಇನ್ನು ಹತ್ತು ದಿನದಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಹೇಳಿದ್ದಾರೆ.