News Karnataka Kannada
Monday, April 29 2024
ಬೆಂಗಳೂರು

ಮುಖ್ಯಮಂತ್ರಿ ಯನ್ನು ಭೇಟಿ ಮಾಡಿದ ಕ್ರೈಸ್ತ ಬಿಷಪ್

Basavaraj Bommaih V Ponnuraj 01082021
Photo Credit :

ಬೆಂಗಳೂರು : ಕ್ರಿಶ್ಚಿಯನ್ ಮಿಷನರಿಗಳು ನನ್ನ ಹೆತ್ತ ತಾಯಿಯೇ ಮತಾಂತರ ಆಗಿದ್ದಾರೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿಧಾನಸಭೆಯಲ್ಲಿ ನೋವು ತೋಡಿಕೊಂಡ ಬೆನ್ನಲ್ಲೇ  ಇದರ ವಿರುದ್ಧ ಖಂಡಿತ ಒಳ್ಳೆಯ ಬಿಲ್ ತರ್ತೇವೆ, ಖಂಡಿತವಾಗಿ ನಮ್ಮ ಸರ್ಕಾರ ಇದನ್ನು ಸಹಿಸಲ್ಲ ಎಂದು ವಿಧಾನ ಸೌಧದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಭರವಸೆ  ನೀಡಿದ್ದಾರೆ.

ಇದರ ಮಧ್ಯೆ ಕ್ರೈಸ್ತ ಬಿಷಪ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ವಿಧಾನಸೌಧದಲ್ಲಿ ಭೇಟಿಯಾಗಿದ್ದು, ಮತಾಂತರದ ಬಗ್ಗೆ ಚರ್ಚೆ ನಡೆಸಿದರು.

ಸಿಎಂ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಾ. ಪೀಟರ್ ಮಚಾಡೋ, ನಾವು ಯಾರು ಮತಾಂತರ ಮಾಡುತ್ತಿಲ್ಲ. ನಾವೆಲ್ಲ ಶಿಕ್ಷಣ ಕ್ಷೇತ್ರದಲ್ಲಿ ಇದ್ದೇವೆ. ಇದನ್ನ ದೊಡ್ಡ ವಿಷಯ ಮಾಡೋದು ಸರಿಯಲ್ಲ. ನಮ್ಮ ಧರ್ಮದವರಿಗೆ ನೈತಿಕತೆ ಇದೆ‌. ಜನರಿಗೆ ನಾವು  ಫೋರ್ಸ್ ಮಾಡಿಲ್ಲ. ಇದಕ್ಕಾಗಿ ಕಾಯ್ದೆ ಮಾಡುವ ಅಗತ್ಯ ಇಲ್ಲ ಎಂದರು.

ನಾವು ಮತಾಂತರ ಮಾಡೋದಕ್ಕೆ ಇಲ್ಲ. ಪ್ರತಿಯೊಬ್ಬ ಧರ್ಮಧ್ಯಕ್ಷರ ಹೆಸರಲ್ಲಿ ನೂರಾರು ಶಾಲಾ,ಕಾಲೇಜು,ಆಸ್ಪತ್ರೆಗಳಿವೆ. ಒಂದು ಲಕ್ಷಕ್ಕಿಂತ ಹೆಚ್ಚಾಗಿ ಮಕ್ಕಳಿದ್ದಾರೆ. ಒಬ್ಬರಿಗೂ ಮತಾಂತರ ಮಾಡಲು ನಾವು ಹೇಳಿಲ್ಲ. ಅಪ್ಪಿತಪ್ಪಿ ಸಣ್ಣ ಘಟನೆಯಾಗಿದ್ದು ದೊಡ್ಡ ವಿಷಯ ಮಾಡೋದು ಸರಿಯಲ್ಲ. ನಾವು ಸಿಎಂಗೆ ಹೇಳಿದ್ದೇವೆ. ನಮಗೆ ಗೊತ್ತಿದೆ ನೀವ್ಯಾರು ಹಾಗಲ್ಲ ಅಂತ ಸಿಎಂ ಹೇಳಿದ್ದಾರೆ. ಯಾರೋ ಮಸಿ ಬಳಿಯುವ ಪ್ರಯತ್ನ ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು