News Karnataka Kannada
Sunday, April 28 2024
ಬೆಂಗಳೂರು

ಮುಜರಾಯಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ: ಸಚಿವೆ ಜೊಲ್ಲೆ

Shashikala Jole 19082021
Photo Credit :

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಅಧೀನದ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ಅಧಿಕಾರ ವಹಿಸಿಕೊಂಡ ಬಳಿಕ ವಿಧಾನಸೌಧದಲ್ಲಿ ನೂತನ ಕಚೇರಿಯ ಪೂಜೆ ನಡೆಸಿದ ಅವರು ಅಧಿಕಾರಿಗಳ ಜತೆ ಸಭೆ ನಡೆಸಿದರು.

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎ, ಬಿ ಮತ್ತು ಸಿ ದರ್ಜೆಯ ದೇವಸ್ಥಾನಗಳ ಜಿಲ್ಲಾವಾರು ಮಾಹಿತಿ ಪಡೆದುಕೊಂಡು, ಆಸ್ತಿ ಎಷ್ಟಿದೆ ಎಂಬುದನ್ನು ಸಮೀಕ್ಷೆ ನಡೆಸಿ, ದೇವಸ್ಥಾನಗಳ ಆಸ್ತಿ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ದೇವಸ್ಥಾನಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಅಲ್ಲದೆ, ಭಕ್ತರಿಗೆ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಮಹಾರಾಷ್ಟ್ರದ ಫಂಡರಾಪುರ ಮತ್ತು ತುಳಜಾ ಭವಾನಿ, ತಮಿಳುನಾಡು, ಕೇರಳದ ಪ್ರಸಿದ್ಧ ದೇವಸ್ಥಾನಗಳಲ್ಲಿ ಕರ್ನಾಟಕದ ಯಾತ್ರಿ ನಿವಾಸ್‌ ನಿರ್ಮಾಣ ಮಾಡುವ ಬಗ್ಗೆಯೂ ಅವರು ಅಧಿಕಾರಿಗಳ ಜತೆ ಚರ್ಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು