News Karnataka Kannada
Monday, April 29 2024
ಮೈಸೂರು

ಮೇಕೆದಾಟು ಶೀಘ್ರ ಜಾರಿಗೆ ಆಮ್ ಆದ್ಮಿ ಪಾರ್ಟಿ ಆಗ್ರಹ

Rsz M2
Photo Credit :

ಮೈಸೂರು : ಬಹು ನಿರೀಕ್ಷಿತ ಮೇಕೆದಾಟು ಯೋಜನೆಯ ಗುದ್ದಲಿ ಪೂಜೆ ಆದಷ್ಟು ಬೇಗ ಪೂರ್ಣಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿತು.

ಮೇಕೆದಾಟು ಯೋಜನೆಯ ರೂಪುರೂಷೆ ಸಿದ್ಧವಾಗಿ ಹಲವು ವರ್ಷಗಳಾದರೂ, ಇನ್ನೂ ಕಾರ್ಯರೂಪಕ್ಕೆ ಬಾರದಿರುವುದಕ್ಕೆ ರಾಜ್ಯವನ್ನಾಳಿದ ಕಾಂಗ್ರೆಸ್, ಜೆಡಿಎಸ್‌, ಬಿಜೆಪಿ ಕಾರಣ. ಕೇಂದ್ರ ಸರ್ಕಾರದೊಂದಿಗೆ ಗಂಭೀರವಾಗಿ ಚರ್ಚಿಸಲು ಮೂರೂ ಪಕ್ಷಗಳ ಸರ್ಕಾರಗಳು ಮುಂದಾಗಲಿಲ್ಲ.

ನೂತನ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರಿಗೆ ತಾವು ಹೈಕಮಾಂಡ್ ಗುಲಾಮರಲ್ಲ ಎಂದು ತೋರಿಸಲು ಇದು ಒಳ್ಳೆಯ ಅವಕಾಶ. ಕೇಂದ್ರ ಸರ್ಕಾರ ಹಾಗೂ ತಮಿಳುನಾಡಿನ ಒತ್ತಡಕ್ಕೆ ಮಣಿಯದೇ ಮೇಕೆದಾಟು ಯೋಜನೆಗೆ ಅವರು ತಕ್ಷಣವೇ ಗುದ್ದಲಿ ಪೂಜೆ ನೆರವೇರಿಸುವ ಧೈರ್ಯ ತೋರಲಿ ಎಂದು ಎಎಪಿ ಜಿಲ್ಲಾಧ್ಯಕ್ಷೆ ಮಾಲವಿಕ ಗುಬ್ಬಿವಾಣಿಯವರು ಹೇಳಿದರು. ಇದು ರಾಜ್ಯದ ಅಸ್ಮಿತೆಯ ಪ್ರಶ್ನೆಯಾಗಿದ್ದು, ಮುಖ್ಯಮಂತ್ರಿಗಳು ಗಟ್ಟಿ ನಿರ್ಧಾರ ತೆಗೆದುಕೊಳ್ಳಲೇ ಬೇಕು .

ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಸುವರ್ಣಯುಗ ಆರಂಭವಾಗುತ್ತದೆ ಎಂದು ಹೇಳಿಕೊಂಡು ಬಿಜೆಪಿಯು ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆದಿದೆ. ಆದರೆ ಈ ಡಬಲ್‌ಎಂಜಿನ್‌ಸರ್ಕಾರಕ್ಕೆ ರಾಜ್ಯದ ಪರವಾಗಿ ದನಿ ಎತ್ತುವ ತಾಕತ್ತಿಲ್ಲ. ʻಡಬಲ್‌ಎಂಜಿನ್‌ʼ ಆಡಳಿತ ನೀಡುವುದಾಗಿ ಹೇಳಿದ್ದ ಬಿಜೆಪಿಯು ʻಡಬಲ್‌ಸ್ಟ್ಯಾಂಡರ್ಡ್‌ʼ ಆಡಳಿತ ನೀಡುತ್ತಿದೆ. ತಮಿಳುನಾಡಿನಲ್ಲೇ ಒಂದು ನಿಲುವು, ಕರ್ನಾಟಕದಲ್ಲಿ ಮತ್ತೊಂದು ನಿಲುವು ತೆಗೆದುಕೊಳ್ಳುವ ಮೂಲಕ ವಿನಾಕಾರಣ ವಿವಾದ ಸೃಷ್ಟಿಸುತ್ತಿದೆ.

ಮೇಕೆದಾಟು ಯೋಜನೆಯಿಂದ ಕುಡಿಯುವುದಕ್ಕಷ್ಟೇ ನೀರನ್ನು ಬಳಸಿಕೊಳ್ಳಲಾಗುತ್ತದೆ. ಕೃಷಿಗೆ ಆ ನೀರನ್ನು ಬಳಸುವುದಿಲ್ಲ. ಆದ್ದರಿಂದ ತಮಿಳುನಾಡಿಗೆ ಇದರಿಂದ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಅಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್‌ನಾಯಕರು ವಿನಾಕಾರಣ ಮೇಕೆದಾಟು ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ದ್ರೋಹ ಬಗೆಯುತ್ತಿರುವ ಎರಡೂ ಪಕ್ಷಗಳಿಗೆ ರಾಜ್ಯದ ಜನರು ತಕ್ಕ ಪಾಠ ಕಲಿಸಬೇಕಿದೆ.

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ, ಮೈಸೂರು ಜಿಲ್ಲೆ ಆಮ್ ಆದ್ಮಿ ಪಾರ್ಟಿ ತನ್ನ ಬೆಂಬಲ ಸೂಚಿಸಿತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು