ಬೆಂಗಳೂರು, ; ತನ್ನ ದುಶ್ಚಟಗಳಿಗಾಗಿ ಹಣ ಹೊಂದಿಸಲು ಸ್ನೇಹಿತನೊಂದಿಗೆ ಸೇರಿ ಮೊಬೈಲ್ ಹಾಗೂ ಸರಗಳ್ಳತನ ಮಾಡುತ್ತಿದ್ದ ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿ 3.34 ಲಕ್ಷ ರೂ. ಬೆಲೆಬಾಳುವ 2 ಚಿನ್ನದ ಸರ, 6 ಮೊಬೈಲ್ ಹಾಗೂ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿ ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕದ್ದ ಸರಗಳನ್ನು ಮಾರಾಟ ಮಾಡಲು ಪ್ರಮುಖ ಆರೋಪಿ ಚಿಕ್ಕಪ್ಪನಿಗೆ ಕೊಟ್ಟಿದ್ದು, ಇದೀಗ ಈತನನ್ನು ಸಹ ಬಂಧಿಸಲಾಗಿದೆ. ಜುಲೈ 31ರಂದು ರಾತ್ರಿ ತಮ್ಮ ಮನೆ ಬಳಿ ನಡೆದು ಹೋಗುತ್ತಿದ್ದ ವ್ಯಕ್ತಿಯ ಕೊರಳಲ್ಲಿದ್ದ 15 ಗ್ರಾಂ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು ಎಗರಿಸಿ ಪರಾರಿಯಾಗಿದ್ದರು.
ಈ ಬಗ್ಗೆ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಬ್ರಿಜೇಶ್ ಮ್ಯಾಥ್ಯೂ ಹಾಗೂ ಸಿಬ್ಬಂದಿ ತನಿಖೆ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದರು. ಆರೋಪಿಗಳು ಚಂದ್ರಾ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಕಳವು ಮಾಡಿದ ದ್ವಿಚಕ್ರ ವಾಹನ ಬಳಸಿಕೊಂಡು ಚಿನ್ನದ ಸರ ಹಾಗೂ ಮೊಬೈಲ್ ಪೋನ್ ಸುಲಿಗೆ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ.
ಮೊಬೈಲ್ ಮತ್ತು ಸರಗಳ್ಳರ ಬಂಧನ ; 3.34 ಲಕ್ಷ ಮೌಲ್ಯದ ವಸ್ತು ವಶ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.