ಬೆಂಗಳೂರು : ಮೌಢ್ಯ ನಿಷೇಧ ಕಾಯಿದೆ ಮೂಲಕ ಜನರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರಬೀಡಿ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಲಹೆ ಮಾಡಿದ್ದೆ. ಅವರವರ ಧಾರ್ಮಿಕ ನಂಬಿಕೆಗಳ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರ ವತಿಯಿಂದ ಕೊರೋನಾ ಯೋಧರಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ಮುಂದಾಗಿದ್ದರು. ಈ ವೇಳೆ ಈ ವೇಳೆ ಜನರ ನಂಬಿಕೆಗೆ ಕೈ ಹಾಕುವುದು ಬೇಡ ಎಂದು ಸಲಹೆ ನೀಡಿದ್ದೆ. ನನ್ನ ಜತೆಗೆ ಹಲವರು ಸಚಿವರು ಸಹ ಇದೇ ಸಲಹೆಯನ್ನು ನೀಡಿದ್ದರು. ಒಂದೊಂದು ಧರ್ಮದಲ್ಲಿ ಒಂದೊಂದು ನಂಬಿಕೆ ಇರುತ್ತದೆ. ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸಬಾರದು ಎಂದು ಹೇಳಿದ್ದೆ ಎಂದು ಹೇಳಿದರು.