ಬೆಂಗಳೂರು : ನಮಗೆ ಬಡವರನ್ನು ಕಂಡಾಗ ತಿನ್ನುವ ಅನ್ನ ನೆನಪಾಗಿ ಇಂದಿರಾ ಕ್ಯಾಂಟೀನ್ ಮಾಡಿದ್ದೇವೆ. ಸಿ.ಟಿ. ರವಿ ಅವರಿಗೆ, ಅವರ ಆಸಕ್ತಿ-ಸಂಸ್ಕೃತಿಗೆ ತಕ್ಕ ಹಾಗೆ ಬಾರ್ – ಹುಕ್ಕಾಬಾರ್ ನೆನಪಾಗಿದೆ,ಯಾರಿಗೆ ಏನು ಪ್ರಿಯಾವೋ ಅದೇ ನೆನಪಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿ. ಟಿ ರವಿ ಹೇಳಿಕೆಗೆ ವ್ಯಂಗ್ಯದಿಂದ ತಿರುಗೇಟು ನೀಡಿದ್ದಾರೆ
ಈ ಸಂಬಂಧ ಟ್ಟೀಟ್ ಮಾಡಿರುವ ಅವರು, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಮುಖ್ಯಮಂತ್ರಿಗಳು ಅವರನ್ನು ಅಬಕಾರಿ ಸಚಿವರಾಗಿ ಮಾಡಿ ಅವರ ಆಸೆ ಈಡೇರಿಸಬೇಕು ಎಂದು ಕಾಲೆಳೆದಿದ್ದಾರೆ.
ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ಗಳು ಬಿಜೆಪಿ ನಾಯಕರ ಕಣ್ಣು ಕುಕ್ಕುತ್ತಿರುವುದು ಯಾಕೆ? ಎಂದು ಮಾಜಿ ಸಿಎಂ ಪ್ರಶ್ನಿಸಿದ್ದು, ಅನ್ನಭಾಗ್ಯದ ಅಕ್ಕಿ ಕಡಿಮೆ ಮಾಡಿದಿರಿ, ಇಂದಿರಾ ಕ್ಯಾಂಟೀನ್ ಮುಚ್ಚಲು ನೋಡಿದಿರಿ. ಈಗ ಹೆಸರಿನ ವಿವಾದ. ಇವರ ಕೋಪ ನೆಹರೂ-ಇಂದಿರಾ ಗಾಂಧಿ ಮೇಲೆಯೋ? ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆಯೋ? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.