ಲವ್ ಮಾಡಲು ನಿರಾಕರಿದಳು ಎನ್ನುವ ಕಾರಣಕ್ಕೆ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇಂದು (ಗುರುವಾರ) ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೊದಲ ಮಹಡಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ.
ಟಿ ಜಾನ್ ಕಾಲೇಜಿನಲ್ಲಿ ಓದುತ್ತಿದ್ದ ಯುವ ಸಿಂಚನಾ ಕೊಲೆಯಾದ ದುರ್ದೈವಿ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹೆಬ್ಬಗೋಡಿ ಮತ್ತು ಜಿಗಣಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರೇಮ ನಿರಾಕರಣೆ ಹಿನ್ನೆಲೆ ಯುವತಿಯನ್ನು ಕೊಲೆ ಮಾಡಿ, ಬಳಿಕ ಯುವಕ ನೇಣಿಗೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ.