ಬೆಂಗಳೂರು: ಯುವಕರೊಬ್ಬರಿಗೆ ಮೂತ್ರ ನೆಕ್ಕಿಸಿದ್ದ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಠಾಣೆ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಬಂಧಿಸಿದ್ದಾರೆ.
‘ಮಹಿಳೆಗೆ ಕರೆ ಮಾಡಿದ್ದ ವಿಚಾರಕ್ಕಾಗಿ ಅರ್ಜುನ್, ನನ್ನನ್ನು ಠಾಣೆಗೆ ಕರೆದೊಯ್ದು ಥಳಿಸಿದ್ದರು. ಕುಡಿಯಲು ನೀರು ಕೇಳಿದಾಗ, ವ್ಯಕ್ತಿಯೊಬ್ಬರಿಂದ ನನ್ನ ಬಾಯಿಗೆ ಮೂತ್ರ ಹೊಯ್ಯಿಸಿದ್ದರು. ನೆಲದ ಮೇಲೆ ಬಿದ್ದಿದ್ದ ಮೂತ್ರವನ್ನೂ ನೆಕ್ಕಿಸಿದ್ದರು’ ಎಂದು ಆರೋಪಿಸಿ ಮೂಡಿಗೆರೆ ತಾಲ್ಲೂಕಿನ ಕಿರಗುಂದದ ಯುವಕ ಕೆ.ಎಲ್. ಪುನೀತ್, ಗೋಣಿಬೀಡು ಠಾಣೆಗೆ ದೂರು ನೀಡಿದ್ದರು. ಅರ್ಜುನ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಈ ಪ್ರಕಣವನ್ನು ಸಿಐಡಿಗೆ ವಹಿಸಲಾಗಿತ್ತು. ಡಿಜಿಪಿ ಬಿ.ಎಸ್. ಸಂಧು ಮಾರ್ಗದರ್ಶನದಲ್ಲಿ ತನಿಖೆ ಆರಂಭಿಸಿದ್ದ ಎಸ್ಪಿ ರವಿ ಚನ್ನಣ್ಣನವರ ನೇತೃತ್ವದ ತಂಡ, ಆರೋಪಿಯನ್ನು ಬಂಧಿಸಿದೆ.