ಬೆಂಗಳೂರು: ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮತ್ತು ಪದ್ಮಕುಮಾರಿ ಅವರು ಬಿಬಿಎಂಪಿಗೆ ₹ 8.5 ಕೋಟಿ ಅಧಿಕ ಮೊತ್ತದ ತೆರಿಗೆ ವಂಚಿಸಿದ್ದಾರೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.
ಬಿಬಿಎಂಪಿಯ ದಾಸರಹಳ್ಳಿ ವಲಯದ ವ್ಯಾಪ್ತಿಯಲ್ಲಿರುವ ರಾಕ್ಲೈನ್ ಮಾಲ್ ಕೇವಲ 48,500 ಚದರ ಅಡಿ ವಿಸ್ತೀರ್ಣ ಇದೆ ಎಂದು ಬಿಬಿಎಂಪಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಆರು ಮಹಡಿ ಸೇರಿದಂತೆ 1,22,743 ಚದರ ಅಡಿ ವಿಸ್ತಾರದಲ್ಲಿ ಈ ಮಾಲ್ ನಿರ್ಮಾಣಗೊಂಡಿದೆ ಎಂದು ಅವರು ದೂರಿದರು.
ಪಾಲಿಕೆಗೆ ಬೃಹತ್ ಮೊತ್ತದ ತೆರಿಗೆ ವಂಚಿಸಿರುವ ಬಗ್ಗೆ ಮಹಾಲೆಕ್ಕಪರಿಶೋಧಕರ ಕಚೇರಿಯ ಅಧಿಕಾರಿಗಳು ಮತ್ತು ದಾಸರಹಳ್ಳಿ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳು ನಡೆಸಿದ ಜಂಟಿ ಸಮೀಕ್ಷೆ ಕಾರ್ಯದಲ್ಲಿ ತಿಳಿದು ಬಂದಿದೆ. 74,243 ಚದರ ಅಡಿ ವಿಸ್ತೀರ್ಣವನ್ನು ಮುಚ್ಚಿಟ್ಟು, ಪಾಲಿಕೆಗೆ ತೆರಿಗೆ ವಂಚಿಸಲಾಗಿದೆ’ ಎಂದು ಹೇಳಿದರು.
‘2011–12ರಿಂದ 2020–21ರವರೆಗಿನ ಅವಧಿಯವರೆಗೆ ಒಟ್ಟು 3.8 ಕೋಟಿ ರು ಆಸ್ತಿ ತೆರಿಗೆ, ವಾರ್ಷಿಕ ಬಡ್ಡಿದರ, ದಂಡ ಸೇರಿ, ಒಟ್ಟು 8.51 ಕೋಟಿ ತೆರಿಗೆ ಪಾವತಿಸಬೇಕಾಗಿದೆ ಎಂದು ಹೇಳಿದರು.
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…
ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 4…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…