ಬೆಂಗಳೂರು:ರಾಜ್ಯದಲ್ಲಿ ಮೂರು ದಿನ ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು , ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ನೀಡಿದೆ .
ಇಂದು ಮತ್ತು ನಾಳೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ , ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ .
ತುಮಕೂರು , ದಾವಣಗೆರೆ , ಚಿತ್ರದುರ್ಗ , ಚಾಮರಾಜನಗರ , ಕೊಡಗು , ಹಾಸನ , ಶಿವಮೊಗ್ಗ , ಮೈಸೂರು , ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು , ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು , ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ .