ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 326 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98, 3459 ಕ್ಕೆ ಏರಿಕೆಯಾಗಿದೆ.
380 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಒಟ್ಟು ಬಿಡುಗಡೆಯಾದವರ ಸಂಖ್ಯೆ 2,93,6039ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 9, 450 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಮಕ್ಕಳಿಗೆ ಲಸಿಕೆ ಹಾಕುವ ಮುನ್ನ ಸುರಕ್ಷತೆ, ಪರಿಣಾಮಕಾರಿತ್ವದ ಬಗ್ಗೆ ಮಾಹಿತಿಯ ಅಗತ್ಯವಿದೆ: ತಜ್ಞರು
ಸೋಂಕಿನಿಂದ ಇಂದು ನಾಲ್ಕು ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 37,941ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.41 ರಷ್ಟಿದ್ದು, ಮರಣ ಪ್ರಮಾಣ ಶೇ 1.22 ರಷ್ಟಿದೆ. ಬೆಂಗಳೂರಿನಲ್ಲಿ 173 ಹೊಸ ಪ್ರಕರಣ ಪತ್ತೆಯಾಗಿದ್ದು, 87 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಓರ್ವ ಸೋಂಕಿತ ಮೃತಪಟ್ಟಿದ್ದಾರೆ.
ಬಾಗಲಕೋಟೆ, ಬೀದರ್, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಮನಗರ, ವಿಜಯಪುರ ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.