ಬೆಂಗಳೂರು, ; ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಬಾಗಲಕೋಟೆ, ಬೀದರ್, ರಾಯಚೂರು ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.1.01 ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ.2.46 ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,481 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ರಾಜ್ಯದಲ್ಲಿಂದು 1,298 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 32 ಮಂದಿ ಸಾವನ್ನಪ್ಪಿದ್ದಾರೆ ಜೊತೆ 1,833 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.ಹೊಸದಾಗಿ ದಾಖಲಾಗಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,31,827 ಕ್ಕೆ ಏರಿಕೆಯಾಗಿದೆ ಜೊತೆಗೆ ಚೇತರಿಸಿಕೊಂಡವರ ಸಂಖ್ಯೆ 28,73,283ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಒಟ್ಟಾರೆ ಸಾವನ್ನಪ್ಪಿದವರ ಸಂಖ್ಯೆ 37,039 ಕ್ಕೆ ಹೆಚ್ಚಳವಾಗಿದೆ.
ರಾಜ್ಯದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.