ಬೆಂಗಳೂರು : ನಾಳೆಯಿಂದ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 6-8ನೇ ತರಗತಿಗಳು ಪ್ರಾರಂಭವಾಗಲಿದೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿನ (ಕೇರಳ ಗಡಿ ಹಂಚಿಕೊಂಡಿರುವ ತಾಲೂಕುಗಳನ್ನು ಹೊರತುಪಡಿಸಿ) ಎಲ್ಲಾ ಶಾಲೆಗಳು ತೆರೆಯಲಿದ್ದು, ಶಿಕ್ಷಣ ಇಲಾಖೆ ಕಠಿಣ ಸೂಚನೆಗಳನ್ನು ನೀಡಿದೆ.
ರಾಜ್ಯದಲ್ಲಿನ ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲ್ಲೂಕು, ವಲಯಗಳಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 6 ರಿಂದ 8ನೇ ತರಗತಿಗಳನ್ನು 09.2021 ರಿಂದ ಪ್ರಾರಂಭಿಸಲಾಗಿದೆ.
ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ. ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿ ನೀರಿನ ವ್ಯವಸ್ಥೆ ಕಡ್ಡಾಯ. ವಿದ್ಯಾರ್ಥಿಗಳು ಮನೆಯಿಂದಲೇ ಕುಡಿಯುವ ನೀರು, ಉಪಹಾರ ತರಬೇಕು. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಕ್ಲಾಸ್ ನಲ್ಲೂ ಹಾಜರಾಗಬಹುದು. ಶನಿವಾರ ಶಾಲೆಗಳನ್ನು ಸ್ಯಾನಿಟೈಜ್ ಮಾಡುವ ಕಾರ್ಯವನ್ನು ಕೈಗೊಳ್ಳುವುದು. ಶನಿವಾರ ಹಾಗೂ ಭಾನುವಾರ ಯಾವುದೇ ಭೌತಿಕ, ಆನ್ ಲೈನ್ ಕ್ಲಾಸ್ ಇಲ್ಲ.