ಬೆಂಗಳೂರು, ನ.10 : ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒನಕೆ ಓಬವ್ವ ಜಯಂತಿಯನ್ನು ನಾಳೆ ಸರಳವಾಗಿ ಆಚರಿಸಲಾ ಗುವುದು ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಯೋಗದ ಅಧ್ಯಕ್ಷ ನೆಹರು ಓಲೇಕಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಓಬವ್ವ ಜಯಂತಿ ಆಚರಣೆಯ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಕೋವಿಡ್ ಹಿನ್ನೆಲೆ, ಸಮಯದ ಅಭಾವದಿಂದ ಸರಳವಾಗಿ ಈ ಬಾರಿ ಜಯಂತಿಯನ್ನು ಆಚರಿಸಲಾಗುವುದು.
ನಾಳೆ ಬೆಳಗ್ಗೆ 11.30 ಗಂಟೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಓಬವ್ವ ಜಯಂತಿ ಆಚರಿಸಲಾಗುವುದು. ಮುಂದಿನ ವರ್ಷ ದೊಡ್ಡ ಮಟ್ಟದಲ್ಲಿ ಈ ಜಯಂತಿ ಆಚರಿಸಲಾಗುವುದು. ಅಲ್ಲದೆ ಮಹಿಳಾ ಸಾಧಕರನ್ನು ಗುರುತಿಸಿ ಗೌರವಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಳ್ಳಲಾಗುವುದು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕ ಎಸ್.ರಂಗಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.