ಬೆಂಗಳೂರು

ರಾಜ್ಯದಲ್ಲೂ ಪಢನಾ – ಲಿಖನಾ ಕಾರ್ಯಕ್ರಮ ಜಾರಿ – ಬಿ. ಸಿ. ನಾಗೇಶ್

ಬೆಂಗಳೂರು: ಕೇಂದ್ರ ಸರ್ಕಾರದ ಪಢನಾ-ಲಿಖನಾ ಕಾರ್ಯಕ್ರಮವನನ್ನು ರಾಜ್ಯದ 5 ಜಿಲ್ಲೆಗಳಲ್ಲಿ ಪ್ರಾರಂಭ ಮಾಡಲಾಗಿದೆ.

ರಾಯಚೂರು, ಕಲಬುರಗಿ, ಯಾದಗಿರಿ, ಚಾಮರಾಜನಗರ, ವಿಜಯಪುರದಲ್ಲಿ ಕಾರ್ಯಕ್ರಮ ಮಾಡಲಾಗಿದೆ ಎಂದು ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದರು.

55ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಅವರು, 2021-22ನೇ ಸಾಲಿನ ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಕ್ಷರತಾ ಸಪ್ತಾಹಕ್ಕೆ ಚಾಲನೆ ನೀಡಿದರು

ಬಳಿಕ ಮಾತನಾಡಿದ ಅವರು, ಅಮೃತ ಮಹೋತ್ಸವದ ಒಳಗೆ ರಾಜ್ಯವನ್ನ ಅನಕ್ಷರಸ್ಥರ ಮುಕ್ತ ರಾಜ್ಯ ಮಾಡುವ ಗುರಿ ನಮಗೆ ಇದೆ. 75 ವರ್ಷ ಆದರು ಇನ್ನು ಓದಲು-ಬರೆಯಲು ಬಾರದವರು ಇದ್ದಾರೆ ಅಂದರೆ ನಮಗೂ ನಾಚಿಕೆ ಆಗಬೇಕು. ಹೀಗಾಗಿ ಇದಕ್ಕೆ ವಿಶೇಷ ಗಮನ ಕೊಡಬೇಕು ಎಂದು ಸಚಿವ ಬಿಸಿ ನಾಗೇಶ್  ಡಿಸಿಗಳಿಗೆ ಸೂಚನೆ ನೀಡಿದರು.

ಕೋವಿಡ್ ಕಾರಣದಲ್ಲಿ ಸಾಕ್ಷರತಾ ಕಾರ್ಯಕ್ರಮ ಅರ್ಧಕ್ಕೆ ನಿಂತಿದೆ. ಅನಕ್ಷರಸ್ತರಿಗೆ ಅಕ್ಷರಸ್ಥರಾಗಿ ಮಾಡೋ ಕಾರ್ಯಕ್ರಮ ನಿಂತು ಹೋಗಿತ್ತು. ಈಗ ಮತ್ತೆ ಈ ಕಾರ್ಯಕ್ರಮ ಪ್ರಾರಂಭ ಆಗಿದೆ.ಈ ವರ್ಷ ವಿಶೇಷವಾಗಿ ಎಲ್ಲಿ ಅನಕ್ಷರಸ್ಥರು ಇರುತ್ತಾರೋ ಅಲ್ಲಿಯೇ ಹೋಗಿ ಕಲಿಸುತ್ತೇವೆ. ಅನಕ್ಷರಸ್ಥರ ಸಂಖ್ಯೆ ಈ ವರ್ಷ ಕಡಿಮೆ ಮಾಡಬೇಕು ಅನ್ನೋದು ನಮ್ಮ ಗುರಿ ಎಂದರು.

ಕೇಂದ್ರ ಸರ್ಕಾರದ 60% ಅನುದಾನ ನಮಗೆ ಸಿಗುತ್ತಿದೆ. ಎನ್.ಜಿ.ಓ. ಮಠಗಳು, ಅಥವಾ ಶಿಕ್ಷಣ ಇಲಾಖೆ ಬಳಸಿಕೊಂಡು ಅನಕ್ಷರಸ್ಥರ ಸಂಖ್ಯೆ ಕಡಿಮೆ ಮಾಡಲು ಕ್ರಮವಹಿಸಲು ಚಿಂತನೆ ಮಾಡಲಾಗಿದೆ ಎಂದು ವಿವರಿಸಿದರು.

Raksha Deshpande

Recent Posts

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

13 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

29 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

59 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago