ಬೆಂಗಳೂರು: ಗ್ರಾಮೀಣ ಭಾಗದ 28 ಸಾವಿರ ಕೆರೆಗಳನ್ನು ಆಯಾ ಗ್ರಾಮ ಪಂಚಾಯಿತಿ ವತಿಯಿಂದಲೇ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಜಿಲ್ಲಾ ಪಂಚಾಯಿತಿಗಳಿಗೆ ಕೆರೆಗಳ ಅಭಿವೃದ್ಧಿ ಕಾರ್ಯ ವಹಿಸಲಾಗಿತ್ತು. ಈಗ ಗ್ರಾಮ ಪಂಚಾಯಿತಿ ಮೂಲಕ ಅಭಿವೃದ್ಧಿ ಪಡಿಸಲಿದ್ದು, ಕೆರೆಗಳನ್ನು ವಹಿಸಲಾಗುವುದು. ಅಭಿವೃದ್ಧಿ ಕಾರ್ಯಕ್ಕೆ ಗುರಿ ನಿಗದಿ ಮಾಡಲಾಗಿದೆ ಎಂದು ಹೇಳಿದರು.
ಇದಲ್ಲದೇ ಕೆರೆ–ಕಲ್ಯಾಣಿಗಳ ಅಭಿ ವೃದ್ಧಿ, ಬದು ನಿರ್ಮಾಣ ಕಾರ್ಯ ಗಳನ್ನೂ ಕೈಗೆತ್ತಿಕೊಳ್ಳಲಾಗಿದೆ. 5 ಎಕರೆ ಒಳಗಿನ ಖಾಸಗಿ ಜಮೀನಿನಲ್ಲಿ ಕೆರೆಗಳ ಅಭಿವೃದ್ಧಿಯಿಂದ ತೋಟಗಾರಿಕೆ ಬೆಳೆ ಕೃಷಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.