ಬೆಂಗಳೂರು,ನ.6 : ರಾಜ್ಯಾದ್ಯಂತ ವಿಧಿಸಿದ್ದ ರಾತ್ರಿ ಕಫ್ರ್ಯೂ ಹಿಂಪಡೆದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಿದ್ದ ಆದೇಶ ವಾಪಸ್ ಪಡೆಯಲಾಗಿದೆ.
ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹಾಗೂ ದೇಶಾದ್ಯಂತ ಇಳಿಮುಖವಾಗಿ ಸಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕಫ್ರ್ಯೂ ಆದೇಶ ವಾಪಸ್ ಪಡೆಯಲಾಗಿದೆ.
ಅದರಂತೆ ಕೊರೊನಾ ಸೋಂಕು ಹಿನ್ನೆಲೆ ಜಾರಿಯಲ್ಲಿದ್ದ ರಾತ್ರಿ ಕಫ್ರ್ಯೂ ಇರುವುದಿಲ್ಲ. ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಭೌತಿಕವಾಗಿ ನಡೆಸುವುದಕ್ಕೆ ಕರ್ನಾಟಕ ಸರ್ಕಾರ ಅನುಮತಿ ನೀಡಿತ್ತು. ಅದರಂತೆ ನವೆಂಬರ್ 8 ರಿಂದ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭವಾಗಲಿವೆ.
ಇದಕ್ಕೂ ಮೊದಲು ಅ.25ರಂದು ಶಾಲೆ ಪುನಾರಂಭಿಸುವಂತೆ ಆದೇಶ ನೀಡಲಾಗಿತ್ತು. ಈಗಾಗಲೇ ಶಾಲೆ ಕಾಲೇಜುಗಳು ಆಫ್ಲೈನ್ ವಿಧಾನದಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿವೆ. ಸಿನಿಮಾ ಹಾಲ್, ಈಜುಕೊಳಗಳಿಗೂ ಅನುಮತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿಧಿಸಿದ್ದ ರಾತ್ರಿ ಕಫ್ರ್ಯೂ ಆದೇಶವನ್ನು ಹಿಂಪಡೆಯಲಾಗಿದೆ.
ಕೊರೊನಾ ಎರಡನೇ ಅಲೆಯ ವೇಳೆ ಜನರನ್ನು ಕೋವಿಡ್ ಸೋಂಕಿನಿಂದ ರಕ್ಷಿಸಲು ರಾಜ್ಯ ಸರ್ಕಾರ ಹಲವಾರು ನಿಯಮಗಳನ್ನು ಜಾರಿಗೊಳಿಸಿತ್ತು. ಇವುಗಳ ನಡುವೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ರಾಜ್ಯದಲ್ಲಿರಾತ್ರಿ ಕಫ್ರ್ಯೂ ವಿಸಿತ್ತು.
ಇದೀಗ ಕೊರೊನಾ ಪ್ರಕರಣಗಳು ಇಳಿಕೆಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ವಿಸಿದ್ದ ರಾತ್ರಿ ಕಫ್ರ್ಯೂವನ್ನು ಸರ್ಕಾರ ಹಿಂಪಡೆದುಕೊಂಡಿದೆ. ಇದರ ಜೊತೆಗೆ ಕುದುರೆ ರೇಸ್ ನಡೆಸಲು ಸಹ ಸರ್ಕಾರ ಅನುಮತಿ ನೀಡಿದೆ. ಕುದುರೆ ರೇಸ್ನಲ್ಲಿ ಭಾಗವಹಿಸುವವರು 2 ಡೋಸ್ ಕೊರೊನಾ ಲಸಿಕೆ ಪಡೆದಿರಬೇಕೆಂದು ಸೂಚಿಸಿದೆ.
ಸ್ಥಳಾವಕಾಶದ ಸಾಮಥ್ರ್ಯದಷ್ಟು ಕುದುರೆಗಳಿಗೆ ಮಾತ್ರ ರೇಸ್ಗೆ ಅನುಮತಿ ನೀಡಲಾಗಿದ್ದು, ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಹಲವು ಕೋವಿಡ್ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ.