ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಿದ ಪರಿಣಾಮ ಮಕ್ಕಳು ಸೇರಿದಂತೆ 9 ಮಂದಿ ಕಣ್ಣಿಗೆ ಹಾನಿಯಾಗಿದ್ದು, ಮಿಂಟೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಲಾಗಿದೆ.
ಆದರೆ ಈ ವೇಳೆ ಪಟಾಕಿ ಸಿಡಿದು ಹಲವರ ಕಣ್ಣಿಗೆ ಗಾಯಗಳಾಗಿವೆ. ನಗರದಲ್ಲಿ ಒಟ್ಟು 9 ಮಂದಿ ಕಣ್ಣಿಗೆ ಹಾನಿಯಾಗಿದೆ. 9 ಜನರಲ್ಲಿ ಮಕ್ಕಳೆ ಹೆಚ್ಚಾಗಿದ್ದಾರೆ. ಕೆಲ ಮಕ್ಕಳಿಗೆ ಮಿಂಟೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.