ಬೆಂಗಳೂರು : ದೇಶದಲ್ಲಿ ಲಸಿಕೆ ಅಭಿಯಾನ ಈಗಾಗಲೇ ಶತಕೋಟಿ ದಾಟಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಲಸಿಕೆ ಅಭಿಯಾನ ತೀವ್ರಗೊಳ್ಳಲಿದೆ.
ಮುಂದಿನ ದಿನಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಎಲ್ಲಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ಸಹಾಯದಿಂದ ಈಗಾಗಲೇ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ.
ಇನ್ನು ಮುಂದೆಯೂ ಲಸಿಕೆ ಅಭಿಯಾನ ತೀವ್ರಗೊಳಿಸಲಾಗುವುದು ಎಂದಿದ್ದಾರೆ. ನಗರದಲ್ಲಿ ಈಗಾಗಲೇ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಪ್ರಕರಣಗಳು ಇಲ್ಲವಾಗಿಸುವ ಬಗ್ಗೆ ಗಮನ ಹರಿಸಲಾಗುವುದು ಎಂದಿದ್ದಾರೆ.