ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿಮಾಡಿದ್ದು , 20 ಡಿವೈಎಸ್ಪಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 20 ಡಿವೈಎಸ್ಪಿ ( ಸಿವಿಲ್ ) ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ರಾಜೇಂದ್ರ ಡಿ ಎಸ್ ಅವರನ್ನು ಬೆಂಗಳೂರು ನಗರದ ಕಬ್ಬನ್ ಪಾರ್ಕ್ ಉಪ ವಿಭಾಗಕ್ಕೆ, ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ರಂಗಪ್ಪ ಟಿ ಅವರನ್ನು ಬೆಂಗಳೂರು ನಗರ ಸಂಪಿಗೆಹಳ್ಳಿ ಉಪ ವಿಭಾಗಕ್ಕೆ, ಎಸ್ ಐ ಟಿ ಯ ಕರ್ನಾಟಕ ಲೋಕಾಯುಕ್ತದಲ್ಲಿದ್ದಂತ ಉದಯ್ ಭಾಸ್ಕರ್ ಜಿ.ವಿ ಅವರನ್ನು ಹಾಸನ ಉಪ ವಿಭಾಗದ ಡಿವೈಎಸ್ಪಿಯಾಗಿ ವರ್ಗಾವಣೆಗೊಳಿಸಿದೆ.
ಹೀಗೆ ಒಟ್ಟು 20 ಸಿವಿಲ್ ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ. ನಿನ್ನೆಯಷ್ಟೇ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿತ್ತು