ಬೆಂಗಳೂರು : ರಾಜ್ಯ ಸರ್ಕಾರ ಯುವ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೊಂದು ಸ್ವಾಮಿ ವಿವೇಕಾನಂದ ಹೆಸರಿನ ಸಂಘಗಳನ್ನು ರೂಪಿಸಿ, ಯುವಕರ ಸ್ವಾವಲಂಬನೆ,ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಲು ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆ ಯೋಜನೆ ರೂಪಿಸಲಿದೆ.
ಈ ಕುರಿತು ಮಾಹಿತಿ ನೀಡಿರುವ ಕ್ರೀಡಾ ಸಚಿವ ನಾರಾಯಣಗೌಡ, ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೊಂದು ಯುವ ಸಂಘಗಳನ್ನು ಸ್ಥಾಪಿಸಿ, ಯುವಕರಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸಿ,ಯುವಸಮುದಾಯಕ್ಕೆ ನಾಯಕತ್ವದ ಗುಣ, ನಿರುದ್ಯೋಗ ನಿವಾರಣೆಗೆ ಯೋಜನೆ ರೂಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಈಗಾಗಲೇ ಜಾರಿಯಲ್ಲಿರುವ ಯುವಸ್ಪಂದನಾ ಯೋಜನೆಯಡಿ ಈ ಸಂಘಗಳನ್ನು ರಚಿಸಿ, ಯುವಕರಿಗೆ ಅಗತ್ಯ ತರಬೇತಿ, ಆರ್ಥಿಕ ಚಟುವಟಿಕೆಗಳನ್ನು ಒದಗಿಸುವ ಹೊಣೆಗಾರಿಕೆಯನ್ನು ಸ್ಥಳೀಯ ಗ್ರಾಮ ಪಂಚಾಯಿತಿಗೆ ವಹಿಸಿದೆ. ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡಿಕೊಡುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ಸಹಾಯಕ ನಿರ್ದೇಶಕರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.