ಬೆಂಗಳೂರು : ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ ಎಸ್ . ಎಂ . ಕೃಷ್ಣಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯ ಮರು ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.
ಯಶಸ್ವಿ ಯೋಜನೆಯು ಗ್ರಾಮೀಣಾ ಸಹಕಾರಿಗಳ ಆರೋಗ್ಯ ಸುರಕ್ಷತಾ ಯೋಜನೆಯಾಗಿದ್ದು,ಯಾವುದೇ ಸಂಘದ ಸದಸ್ಯರು ಕನಿಷ್ಟ ಮೊತ್ತದ ಪ್ರೀಮಿಯಂ ಪಾವತಿಸಿ ತಮ್ಮ ಕುಟುಂಬದವರ ಹೆಸರು ನೋಂದಣಿ ಮಾಡಿಸಿಕೊಂಡರೆ ಹಲವು ವಿಧದ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಮಾಡಿಸಿಕೊಳ್ಳಬಹುದು.
ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ ಯಶಸ್ವಿ ಯೋಜನೆಯನ್ನು ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದೀಗ ಈ ಯೋಜನೆಯನ್ನು ಮರು ಜಾರಿಗೆ ಚಿಂತನೆ ನಡೆಸಲಾಗಿದ್ದು, 2022 ರ ಮಾರ್ಚ್ ನಲ್ಲಿ ಮರುಜಾರಿಯಾಗುವ ಸಾಧ್ಯತೆ ಇದೆ.