ಬೆಂಗಳೂರು,ನ.19 :ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಸ್ಪಂದನಶೀಲವಾಗಿದ್ದರಿಂದಲೇ ರೈತರ ಬೇಡಿಕೆಯಂತೆ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದಾರೆ.ಇದು ಚುನಾವಣೆಗಾಗಿ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಕೇಂದ್ರ ಸರ್ಕಾರ ಕಾಯ್ದೆಗಳನ್ನು ಜಾರಿ ಮಾಡಲು ಮುಂದಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ರೈತರ ಬೇಡಿಕೆಗೆ ಸ್ಪಂದಿಸಿದೆ ಎಂದು ಅಭಿಪ್ರಾಯಪಟ್ಟರು.
ಪಂಚರಾಜ್ಯಗ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಯ್ದೆಗಳನ್ನು ಹಿಂಪಡೆಯಲಾಗಿದೆ ಎಂದು ಹೇಳುವುದು ಸರಿಯಲ್ಲ. ಈ ಕಾಯ್ದೆಗಳನ್ನು ಅನುಷ್ಠಾನ ಮಾಡಲು ಮುಂದಾದಾಗಲೂ ನಾವು ಅನೇಕ ರಾಜ್ಯಗಳಲ್ಲಿ ಚುನಾವಣೆ ಗೆದ್ದಿದ್ದೇವೆ. ಕಾಯ್ದೆ ವಾಪಸ್ ಪಡೆಯುವುದಕ್ಕೂ ಚುನಾವಣೆಗೂ ಸಂಬಂಧವಿಲ್ಲ ಎಂದು ಪುನರುಚ್ಚರಿಸಿದರು.
ದೇಶದಲ್ಲಿ 1992ರಿಂದ ಖಾಸಗೀಕರಣ ಹಾಗೂ ಉದಾರೀಕರಣ ಬಂದ ನಂತರ ಅಂತಾರಾಷ್ಟ್ರೀಯ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಾಯಿತು. ಪರಿಣಾಮ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆ ತರಲು ಈ ಕಾಯ್ದೆಯನ್ನು ಜಾರಿ ಮಾಡಲಾಗಿತ್ತೆಂದು ಸಿಎಂ ಕೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಅಷ್ಟಕ್ಕೂ ಈ ಕಾಯ್ದೆಯ ಕರುಡು ನೀತಿ ಜಾರಿಯಾಗಿದ್ದೇ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಯಲ್ಲಿ. ಈಗಿನ ಎನ್ಡಿಎ ಸರ್ಕಾರ ಕಾಯ್ದೆಯಲ್ಲಿನ ಕೆಲವು ಅಂಶಗಳನ್ನು ಮಾತ್ರ ತಿದ್ದುಪಡಿ ಮಾಡಿ ಅನುಷ್ಠಾನ ಮಾಡಲು ಮುಂದಾಗಿತ್ತು ಎಂದು ತಿಳಿಸಿದರು.
ರೈತರು ತಾವು ಬೆಳೆದ ಬೆಳೆಗಳನ್ನು ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ಕಾಯ್ದೆಯನ್ನು ತಿದ್ದುಪಡಿ ಮಾಡಲಾಯಿತು. ಪಂಜಾಬ್, ಹರಿಯಾಣ ಮತ್ತಿತರ ಕಡೆ ರೈತರು ಪ್ರತಿಭಟನೆ ನಡೆಸಿದರು. ಪ್ರಧಾನಿ ಮೋದಿ ಅವರು ಈ ಬಗ್ಗೆ ಮನವರಿಕೆ ಮಾಡಿಕೊಡಲು ಮುಂದಾದರೂ ಒಪ್ಪಲಿಲ್ಲ. ಹೀಗಾಗಿ ಕಾಯ್ದೆಗಳನ್ನು ಮುಂದಿನ ಸಂಸತ್ ಅವೇಶನದಲ್ಲಿ ಹಿಂಪಡೆಯುವುದಾಗಿ ಘೋಷಿಸಿದ್ದಾರೆ ಎಂದು ವಿವರಿಸಿದರು.
ಚುನಾವಣೆಗಳು ಬರುತ್ತವೆ, ಹೋಗುತ್ತವೆ, ಕಾಯ್ದೆಗಳನ್ನು ಮಾಡುವುದು ಜನರ ಪರವಾಗಿ ಸರ್ಕಾರದ ಉದ್ದೇಶವಾಗಿರುತ್ತದೆ. ಇದು ಯಾವುದೋ ಒಂದು ರಾಜಕೀಯ ಪಕ್ಷದ ಒತ್ತಡಕ್ಕೆ ಮಣಿದು ಹಿಂಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು.