ಬೆಂಗಳೂರು: ಲೋಕಸಭಾಧ್ಯ ಕ್ಷರು ಮತ್ತು ಅವರು ಅಲಂಕರಿಸಿರುವ ಪೀಠಕ್ಕೆ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಓಂ ಬಿರ್ಲಾ ಅವರ ಭಾಷಣದ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಸಂಸದೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭಾಧ್ಯಕ್ಷರು ಲೋಕಸಭೆಯ ಸಭಾಧ್ಯಕ್ಷರನ್ನು ಕರೆಸಿದ್ದಾರೆ. ಇಂತಹ ಅಪರೂಪ ದ ಸಂದರ್ಭದಲ್ಲಿ ಗೈರಾಗುವುದು ಲೋಕಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದಂತೆ. ಆ ರೀತಿ ಆಗುವುದು ಬೇಡ ಮತ್ತು ಸಂಸದೀಯ, ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ಏಕೈಕ ಉದ್ದೇಶ ದಿಂದ ಕಲಾಪದಲ್ಲಿ ನಮ್ಮ ಪಕ್ಷ ಭಾಗವಹಿಸಿತ್ತು ಎಂದರು.
ಕಾಂಗ್ರೆಸ್ ಪಕ್ಷದ ಸದಸ್ಯರು ಕಲಾಪ ಬಹಿಷ್ಕರಿಸಿದ್ದು, ಆ ಪಕ್ಷಕ್ಕೆ ಬಿಟ್ಟ ವಿಚಾರ. ನಮ್ಮ ಪಕ್ಷದ ನಿಲುವನ್ನು ನಾವು ತೆಗೆದುಕೊಂಡಿದ್ದೇವೆ ಎಂದರು.