News Karnataka Kannada
Monday, April 29 2024
ಬೆಂಗಳೂರು

ವನ್ಯಜೀವಿ ಉತ್ಪನ್ನ ಮರಳಿಸಲು ಕಾಲಾವಕಾಶ ಕೊಡುವ ಚಿಂತನೆ: ಸಚಿವ ಖಂಡ್ರೆ

Isaware Kandre
Photo Credit : News Kannada

ಬೆಂಗಳೂರು: ನಟರು ಸೇರಿದಂತೆ ಗಣ್ಯರು ಹುಲಿ ಉಗುರಿನ ನಕಲಿ ಲಾಕೆಟ್‌ ಧರಿಸಿದರೂ ಅವರ ಅಭಿಮಾನಿಗಳು ಅದನ್ನೇ ಫಾಲೋ ಮಾಡುತ್ತಾರೆ. ಈ ನಿಟ್ಟಿನಲ್ಲಿ ಗಣ್ಯರು, ನಟರು ನಕಲಿ ಪೆಂಡೆಂಡ್‌ಗಳನ್ನು ಕೂಡ ಧರಿಸಬಾರದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನ ನಡೆಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದರು.
ಹುಲಿ ಉಗುರು ಸೇರಿದಂತೆ ವನ್ಯ ಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅಂತಹ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದರು.

ವನ್ಯಜೀವಿ ಉತ್ಪನ್ನದಿಂದ ಮಾಡಿದ  ಉತ್ಪನ್ನಗಳಿಗೆ ಮಾಲೀಕತ್ವ ಹಕ್ಕು ಪಡೆಯಲು 2003ರವರೆಗೆ ಕಾಲಾವಕಾಶ ನೀಡಲಾಗಿತ್ತು. ಕೆಲವರು ಈ ನಿಟ್ಟಿನಲ್ಲಿ ಹಕ್ಕು ಪಡೆದಿದ್ದಾರೆ. ಕೆಲವರು ದೃಢೀಕರಣ, ಪ್ರಮಾಣ ಪತ್ರ ಪಡೆದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ವನ್ಯಜೀವಿ ಉತ್ಪನ್ನ ಮರಳಿಸಲು ಕಾಲಾವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

ಅದೇ ರೀತಿ ಚಿನ್ನಾಭರಣ ಮಳಿಗೆಗಳಲ್ಲಿ ನಮ್ಮಲ್ಲಿ ವನ್ಯಜೀವಿಯ ಯಾವುದೇ ಆಭರಣ ತಯಾರಿಸುವುದಿಲ್ಲ, ಮಾರಾಟ ಮಾಡುವುದಿಲ್ಲ. ಇದು ಶಿಕ್ಷಾರ್ಹ ಅಪರಾಧ ಎಂಬ ಫಲಕ ಹಾಕುವಂತೆ ಸೂಚಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು