ಬೆಂಗಳೂರು: ನಗರದ ಜನತೆ ವರಮಹಾಲಕ್ಷ್ಮಿ ಹಬ್ಬದ ಭರಾಟೆಯಲ್ಲಿ ಕೊರೊನಾ ಮರೆತು ಭರ್ಜರಿ ಶಾಪಿಂಗ್ನಲ್ಲಿ ತೊಡಗಿದ್ದಾರೆ. ನಗರದ ಕೆ.ಆರ್ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿಗೆ ಜನಸಾಗರವೇ ಹರಿದು ಬಂದಿದೆ. ಹೂ, ಹಣ್ಣು ತರಕಾರಿ ಸೇರಿ ಹಬ್ಬದ ವಸ್ತು ಖರೀದಿಗಾಗಿ ಜನರು ಮುಗಿಬಿದ್ದ ದೃಶ್ಯ ಕಂಡುಬಂತು.
ಬಿಬಿಎಂಪಿ ಕಮಿಷನರ್ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲದಂತೆ ಜನರು ಕೊರೊನಾ ಮರೆತು ಗುಂಪು ಗುಂಪಾಗಿ ಖರೀದಿಯಲ್ಲಿ ತೊಡಗಿದ್ದಾರೆ. ಕಳೆದೆರಡು ದಿನಗಳಿಂದಲೂ ಮಾಸ್ಕ್ ಇಲ್ಲದೆ, ಅಂತರವನ್ನೂ ಕಾಯ್ದುಕೊಳ್ಳದೆ ಕೋವಿಡ್ ನಿಯಮಗಳ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಎಚ್ಚರಿಕೆ ನೀಡಲು ಬಿಬಿಎಂಪಿ ಅಧಿಕಾರಿಗಳು ಹಾಗೂ ಮಾರ್ಷಲ್ಗಳೂ ಸ್ಥಳದಲ್ಲಿ ಇಲ್ಲದಿರುವುದು ಕಂಡುಬಂದಿದೆ.
ವರಮಹಾಲಕ್ಷ್ಮಿ ಹಬ್ಬದ ಖರೀದಿ ಸಡಗರ : ಕೆ.ಆರ್ ಮಾರುಕಟ್ಟೆಯಲ್ಲಿ ಜನಸಾಗರ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.