ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ವರುಣನ ಅಬ್ಬರಕ್ಕೆ ಮರವೊಂದು ಬಿಎಂಟಿಸಿ ಬಸ್ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿರುವ ಘಟನೆ ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜ್ ರಸ್ತೆಯಲ್ಲಿ ಸಂಜೆ ಸಂಭವಿಸಿದೆ.
ನಾಯಂಡಹಳ್ಳಿ ಕಡೆಗೆ ಬಸ್ ಸಂಚರಿಸುತ್ತಿದ್ದು ಮಳೆ ಕಡಿಮೆ ಇತ್ತು , ಗಾಳಿ ಬಿರುಸಾಗಿ ಬೀಸಿದ್ದರಿಂದ ಮರ ಧರೆಗುರುಳಿದೆ . ಮಳೆಯಿಂದ ಮರವು ವಾಲಿ ವಿದ್ಯುತ್ ಕಂಬಕ್ಕೆ ಹೊಡೆದು ನಂತರ ಬಸ್ ಮೇಲೆ ಬಿದ್ದಿದೆ . ಘಟನೆಯಿಂದ ಬಸ್ ನ ಮುಂಭಾಗ ಜಖಂಗೊಂಡಿದೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ . ಅಲ್ಲದೇ ಡ್ರೈವರ್ ಸಣ್ಣಪುಟ್ಟ ಗಾಯಗಳಾಗಿದ್ದು , ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ .