News Karnataka Kannada
Tuesday, April 30 2024
ಬೆಂಗಳೂರು

ವಾಲ್ಮೀಕಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ

Vidhana Soudha
Photo Credit :

ಬೆಂಗಳೂರು: ವಾಲ್ಮೀಕಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನ ಬಿಡುಗಡೆಗೊಳಿಸಿದ್ದು, ಕಡ್ಡಾಯ ಪಾಲನೆಗೆ ಸೂಚಿಸಿದೆ.

ಕಂದಾಯ ಇಲಾಖೆ, ಅಕ್ಟೋಬರ್ 20ರಂದು ನಡೆಯುವ ವಾಲ್ಮೀಕಿ ಜಯಂತಿ ಮತ್ತು ಈದ್ ಮಿಲಾದ್ ಆಚರಣೆ ವೇಳೆ ಸಾಮೂಹಿಕ ಮೆರವಣಿಗೆ ನಡೆಸದೆ ಸರಳವಾಗಿ ಆಚರಿಸುವಂತೆ ಸೂಚಿಸಿದೆ. ಇನ್ನು ಈ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿ, ಎಸ್ಪಿ, ಬಿಬಿಎಂಪಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರು ನೋಡಿಕೊಳ್ಳಬೇಕು ಎಂದಿದೆ.

ಮಾರ್ಗಸೂಚಿ ಅನ್ವಯ, ಆಚರಣೆ ವೇಳೆ ನಡೆಯುವ ಸಭೆ-ಸಮಾರಂಭ, ಕಾರ್ಯಕ್ರಮಗಳಲ್ಲಿ ನೂರು ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಇನ್ನು ಕೊರೊನಾ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸಬೇಕು. ಅದ್ರಂತೆ, ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.

ಆಚರಣೆ ವೇಳೆ ಧ್ವನಿವರ್ಧಕಗಳ ಬಳಸುವಂತಿಲ್ಲ.ಹಬ್ಬದ ಸಂದರ್ಭದಲ್ಲಿ ಶಾಂತಿಯುತ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಆಚರಣೆ ನಡೆಸಬೇಕು. ಇನ್ನು ಈ ವೇಳೆ ಪರಸ್ಪರ ಹಸ್ತ ಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ ಎಂದು ಮಾರ್ಗಸೂಚಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು