News Karnataka Kannada
Wednesday, May 08 2024
ಬೆಂಗಳೂರು

ವಿಧಾನ ಪರಿಷತ್ ಚುನಾವಣೆ: ಲಕ್ಷ್ಮಣ ಸವದಿ ಸಹಿತ 7 ಅಭ್ಯರ್ಥಿಗಳ ಅವಿರೋಧ ಆಯ್ಕೆ

Lakshmana
Photo Credit :

ಬೆಂಗಳೂರು: ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಅವಿರೋಧ ರೂಪದಲ್ಲೇ ಆಯ್ಕೆ ನಡೆದಿದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಜೂನ್​ 6ರಂದು ಮತದಾನ ನಡೆಯಬೇಕಿತ್ತು.

ಆದರೆ, ವಿಧಾನಸಭೆ ಹಾಗೂ ಪಕ್ಷವಾರು ಬಲಾಬಲ ಆಧಾರದಲ್ಲಿ ಅಭ್ಯರ್ಥಿಗಳು ಕಣದಲ್ಲಿದ್ದರು. ಮೂರು ಪಕ್ಷ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಹೀಗಾಗಿ 7 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಯೂ ಆದ ವಿಶಾಲಾಕ್ಷಿ ಘೋಷಿಸಿದರು.

ಮೇ 24ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು, ಮೇ 25ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು.

ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಸವದಿ ಲಕ್ಷ್ಮಣ, ಟಿ.ನಾರಾಯಣಸ್ವಾಮಿ, ಹೇಮಲತಾ ನಾಯಕ ಹಾಗೂ ಎಸ್​.ಕೇಶವ ಪ್ರಸಾದ,ಕಾಂಗ್ರೆಸ್​ನಿಂದ ಕೆ.ಅಬ್ದುಲ್​ ಜಬ್ಬಾರ್​ ಹಾಗೂ ಎಂ​.ನಾಗರಾಜು. ಜೆಡಿಎಸ್​ನಿಂದ ಶರವಣ ಅವಿರೋಧ ಆಯ್ಕೆಯಾದ ಅಭ್ಯರ್ಥಿಗಳಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು