ಬೆಂಗಳೂರು: ವಿಧಾನ ಸೌಧದಲ್ಲಿ ಉಭಯ ಸದನಗಳ ಕಲಾಪ ಇನ್ನು ಕೆಲವೇ ಹೊತ್ತಿನಲ್ಲಿ ಆರಂಭವಾಗಲಿದೆ. ಅದರಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯಲ್ಲಿ ಹೊರಟಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ನಾಯಕರು ಎತ್ತಿನ ಗಾಡಿಯನ್ನು ಏರಿ ವಿಧಾನಸೌಧ ಚಲೋ ನಡೆಸುತ್ತಿದ್ದಾರೆ.
ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸರ್ಕಾರದ ಗಮನವನ್ನು ಸೆಳೆಯಲು, ಜನರ ಕಷ್ಟವನ್ನು ತೋರಿಸಲು ಕಾಂಗ್ರೆಸ್ ಈ ರೀತಿ ವಿಶಿಷ್ಟವಾಗಿ ಹೋರಾಟಕ್ಕೆ ಮುಂದಾಗಿದೆ. ಪೆಟ್ರೋಲ್-ಡೀಸೆಲ್ ಬೆಲೆಯನ್ನು 25 ರೂಪಾಯಿಗಳಷ್ಟು, ಅಡುಗೆ ಅನಿಲ ಬೆಲೆಯನ್ನು 150 ರೂಪಾಯಿಯಷ್ಟು ಕಡಿಮೆ ಮಾಡಬೇಕೆಂದು ಆಗ್ರಹಿಸಿ ಎತ್ತಿನ ಗಾಡಿಯಲ್ಲಿ ವಿಧಾನಸೌಧದತ್ತ ಹೊರಟಿದ್ದಾರೆ.