ದೇವನಹಳ್ಳಿ: ಚೆನ್ನೈಯಿಂದ ಬೆಂಗಳೂರಿಗೆ ಬರುವ ವಿಮಾನದಲ್ಲಿ ಮಹಿಳಾ ಪ್ರಯಾಣಿಕರ ಹಿಂಬದಿಯ ಸೀಟ್ನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಮಹಿಳೆಯ ಮೈ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ದೂರಿನ್ವಯ ವ್ಯಕ್ತಿಯ ಬಂಧನ ಮಾಡಲಾಗಿದೆ.
ಆಕೆ ಮಾರ್ಕೆಟಿಂಗ್ ಕೆಲಸಕ್ಕೆ ಚೆನ್ನೈಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಏಪ್ರಿಲ್ 18ರ ರಾತ್ರಿ 10ಗಂಟೆ ಸುಮಾರಿಗೆ ಇಂಡಿಗೋ 6e6225 ವಿಮಾನದ ಹಿಂಬದಿ ಸೀಟ್ ನಂ-20aರಲ್ಲಿ ಕುಳಿತಿದ್ದ. ಚೆನ್ನೈ ಮೂಲದ ಕೃಷ್ಣನ್. ಪಿ. ಎಂಬಾತ ಮುಂದಿನ ಸೀಟ್ನಲ್ಲಿ ಕುಳಿತಿದ್ದ ಮಹಿಳೆಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಮಹಿಳೆ ಕೂಡಲೇ ಎಚ್ಚೆತ್ತು ವಾರ್ನಿಂಗ್ ಮಾಡಿದ್ದರು. ಆದರೂ ಆತ ಮೂರ್ನಾಲ್ಕು ಸಲ ಮಹಿಳೆ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ.
ಮಹಿಳೆ ಹಿಂಬದಿ ಸೀಟಿನ ಕೃಷ್ಣನ್ನಿಂದ ವಿಮಾನದಲ್ಲೆ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ವಿಮಾನದ ಕ್ಯಾಬಿನ್ ಕ್ರೂಗೆ ತಿಳಿಸಿದ್ದರು. ಕೃಷ್ಣನ್ ಜೊತೆ ಕೂತಿದ್ದ ದಂಪತಿ ಸಹ ಈತನ ಕೃತ್ಯದ ಬಗ್ಗೆ ಸಿಬ್ಬಂದಿಗೆ ತಿಳಿಸಿದ್ದರು. ವಿಮಾನದಿಂದ ಇಳಿದ ಕೂಡಲೇ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಮಹಿಳೆ ದೂರು ದಾಖಲಿಸಿದ್ದ ಪರಿಣಾಮ ಕೃಷ್ಣನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…