ವೈಯರ್ ನಿಂದ ಕತ್ತು ಬಿಗಿದು ಪ್ರಿಯತಮೆ ತಾಯಿಯ ಕೊಲೆ : ಆರೋಪಿಯ ಬಂಧನ

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಪ್ರಿಯತಮೆಯ ತಾಯಿಯನ್ನು ಪ್ಲಾಸ್ಟಿಕ್ ವೈರ್‌ನಿಂದ ಕತ್ತು ಬಿಗಿದು ಕೊಲೆಗೈದಿರುವ ಘಟನೆ ನಗರದ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂಡಲಪಾಳ್ಯ ನಿವಾಸಿ ನಂಜಮ್ಮ (54) ಕೊಲೆಯಾದ ಮಹಿಳೆ. ಈ ಸಂಬಂಧ ಆಕೆಯ ಪುತ್ರಿಯ ಪ್ರಿಯಕರ ರಾಘವೇಂದ್ರ(35) ಎಂಬಾತನನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.

ನಂಜಮ್ಮ ಮೂಡಲಪಾಳ್ಯದಲ್ಲಿ 7 ವರ್ಷಗಳಿಂದ ಒಬ್ಬರೇ ವಾಸವಾಗಿದ್ದು, ಮನೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮತ್ತೊಂದೆಡೆ, ಪುತ್ರಿ ಸುಧಾಗೆ 12 ವರ್ಷಗಳ ಹಿಂದೆ ಶಿವರಾಮೇಗೌಡ ಎಂಬಾತನ ಜತೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಈ ಮಧ್ಯೆ ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದ್ದು, ಆರು ವರ್ಷಗಳಿಂದ ಪ್ರತ್ಯೇಕವಾಗಿ ವಾಸವಾಗಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಡಿಸಿಪಿ ಸಂಜೀವ್ ಪಾಟೀಲ್
ಈ ವೇಳೆ ಪಟ್ಟೆಗಾರಪಾಳ್ಯದಲ್ಲಿ ಗ್ಯಾರೇಜ್ ನಡೆಸುತ್ತಿರುವ ರಾಘವೇಂದ್ರನ ಪರಿಚಯವಾಗಿದ್ದು, ಮದುವೆಯಾಗುವುದಾಗಿ ಆರೋಪಿ ಸುಧಾಗೆ ಹೇಳಿದ್ದ. ವಿಚಾರ ತಿಳಿದ ನಂಜಮ್ಮ, ಪುತ್ರಿ ಮತ್ತು ಆಕೆಯ ಮಕ್ಕಳನ್ನು ಚೆನ್ನಾಗಿ ನೋಡಿಕೊಂಡರೆ ಮದುವೆ ಮಾಡುವುದಾಗಿ ಹೇಳಿದ್ದರು. ಹೀಗಾಗಿ, ಸುಧಾ ಜತೆ ಆರೋಪಿ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ಮಕ್ಕಳನ್ನು ರಾಘವೇಂದ್ರ ಚೆನ್ನಾಗಿ ನೋಡಿಕೊಳ್ಳುತ್ತಿದ್ದ.

ಆದರೆ, ಕೆಲ ತಿಂಗಳಿಂದ ಮದ್ಯ ವ್ಯಸನಿಯಾಗಿ ಅಮಲಿನಲ್ಲಿ ಪ್ರೇಯಸಿ ಮತ್ತು ಆಕೆಯ ಮಕ್ಕಳ ಮೇಲೆ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತ ನಂಜಮ್ಮ, 10 ದಿನಗಳ ಹಿಂದೆ ಆತನನ್ನು ಮನೆಯಿಂದ ಹೊರಗೆ ಹಾಕಿದ್ದರು. ಆಕ್ರೋಶಗೊಂಡಿದ್ದ ಆರೋಪಿ, ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಮನೆ ಬಳಿ ಬಂದು ಗಲಾಟೆ ಮಾಡಿದ್ದ. ಮನೆಗೆ ಸೇರಿಸದಿರಲು ನೀನೇ ಕಾರಣ ಎಂದು ಗಲಾಟೆ ತೆಗೆದು, ಕೊಲೆಗೈಯುವುದಾಗಿ ಎಚ್ಚರಿಕೆ ನೀಡಿ ಹೋಗಿದ್ದ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ನಂಜಮ್ಮ ಒಬ್ಬರೇ ಮನೆಯಲ್ಲಿ ವಾಸವಾಗಿದ್ದನ್ನು ಖಚಿತಪಡಿಸಿಕೊಂಡ ಆರೋಪಿ, ತಡರಾತ್ರಿ ಮನೆಗೆ ಬಂದು ಪ್ಲಾಸ್ಟಿಕ್ ವೈರ್‌ನಿಂದ ನಂಜಮ್ಮನ ಕುತ್ತಿಗೆ ಬಿಗಿದು ಕೊಲೆಗೈದು ಬಳಿಕ ಮೈಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ.

ಮೊಮ್ಮಗ ಬಂದಾಗ ಪ್ರಕರಣ ಬೆಳಕಿಗೆ: ಶುಕ್ರವಾರ ಬೆಳಗ್ಗೆ ಮೊಮ್ಮಗ ಅಜ್ಜಿಯ ಮನೆಗೆ ಬಂದಾಗ ಬಾಗಿಲು ಹಾಕಿತ್ತು. ಹಲವು ಬಾರಿ ತಟ್ಟಿದರೂ ಯಾರು ತೆಗೆದಿಲ್ಲ. ಬಳಿಕ ತಾಯಿಯನ್ನು ಕರೆಸಿ, ಅಡುಗೆ ಮನೆಯ ಕಿಟಕಿಯಿಂದ ನೋಡಿದಾಗ ನಂಜಮ್ಮ ಮೃತಪಟ್ಟಿರುವುದು ಗೊತ್ತಾಗಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿ ಕೆಲವೇ ಹೊತ್ತಿನಲ್ಲಿ ಬಂಧಿಸಿದ್ದಾರೆ.

Ashika S

Recent Posts

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

8 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

24 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

26 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

44 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

53 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

1 hour ago