News Karnataka Kannada
Saturday, May 11 2024
ಬೆಂಗಳೂರು

ಶನಿವಾರ ಹಾಗೂ ಭಾನುವಾರವೂ ತರಗತಿ ನಡೆಸೋ ಚಿಂತನೆ : ಸಚಿವ ಬಿ.ಸಿ.ನಾಗೇಶ್

School
Photo Credit :

ಬೆಂಗಳೂರು : ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳನ್ನು ಪುನರಾರಂಭ ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊರೋನಾ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭವಾಗುತ್ತಿರುವುದರಿಂದ ಶೈಕ್ಷಣಿಕ ಪಠ್ಯಕ್ರಮ ಕುಂಠಿತಗೊಂಡಿದೆ. ಹೀಗಾಗಿ ಶನಿವಾರ, ಭಾನುವಾರವೂ ತರಗತಿ ನಡೆಸೋ ಬಗ್ಗೆ ಚಿಂತನೆ ಇದೆ. ಪಠ್ಯ ಕ್ರಮ ಕಡಿತದ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳೋ ಯೋಚನೆ ಇಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇನ್ನೆರಡು ದಿನಗಳಲ್ಲಿಯೇ 1 ರಿಂದ 5ನೇ ತರಗತಿ ಪುನರಾರಂಭ ಕುರಿತಂತೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ತಜ್ಞರು, ಕೋವಿಡ್ ಉಸ್ತುವಾರಿಗಳು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ನೀಡುವಂತ ಸಲಹೆ ಆಧರಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ರಾಜ್ಯದಲ್ಲಿ ತಡವಾಗಿ ಶಾಲೆಗಳು ಆರಂಭವಾಗುತ್ತಿದ್ದರೂ ಪಠ್ಯ ಕ್ರಮ ಕಡಿತದ ಕುರಿತಂತೆ ಯಾವುದೇ ನಿರ್ಧಾರ ಕೈಗೊಳ್ಳುವಂತ ಚಿಂತನೆ ಇಲ್ಲ. ಪಠ್ಯ ಕ್ರಮ ಸರಿಯಾದ ಸಮಯಕ್ಕೆ ಮುಕ್ತಾಯಗೊಳಿಸೋದಕ್ಕಾಗಿ ಶನಿವಾರ ಹಾಗೂ ಭಾನುವಾರವೂ ತರಗತಿ ನಡೆಸೋ ಚಿಂತನೆಯಿದೆ. ಆ ಬಗ್ಗೆ ಶೀಘ್ರವೇ ಸಿಎಂ ನೇತೃತ್ವದಲ್ಲಿ ನಡೆಯಲಿರುವಂತ ಸಭೆಯಲ್ಲಿ ನಿರ್ಧಾರವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ : ಜ.26ರಿಂದ ‘ನಿಮ್ಮ ಮನೆ ಬಾಗಿಲಿಗೆ’ ತಲುಪಲಿವೆ ಸರ್ಕಾರದ ಯೋಜನೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು