ಮಡಿಕೇರಿ: ಶಾರುಖ್ ಖಾನ್ ಪುತ್ರ ಆರ್ಯನ್ ಬಗ್ಗೆ ಮಾಜಿ ಮುಖ್ಯಮಂತ್ರಿ ಡಾ.ಯತೀಂದ್ರ ಸಿದ್ದರಾಮಯ್ಯ ಸಾಫ್ಟ್ ಕಾರ್ನರ್ ಪ್ರದರ್ಶಿಸಿದ್ದಾರೆ.
ಶಾರುಖ್ ಮಗನ ಬಳಿ ಮಾದಕ ದ್ರವ್ಯ ಸಿಕ್ಕಿಲ್ಲ. ಸೇವನೆ ಮಾಡಿರುವ ಆಧಾರ ಕೂಡಾ ಇಲ್ಲ. ಆದ್ರೂ ಅವರನ್ನು ಕಸ್ಟಡಿಗೆ ನೀಡಲಾಗಿದೆ. ಕಾನೂನು ವ್ಯವಸ್ಥೆ ಅಧಿಕಾರದಲ್ಲಿರೋರಿಗೆ ಒಂದು.. ಸರ್ಕಾರದ ವಿರೋಧಿಗಳಿಗೆ ಒಂದು ರೀತಿ ಎಂದು ಹೇಳುವ ಮೂಲಕ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಮಡಿಕೇರಿಯಲ್ಲಿ ಯುವ ಕಾಂಗ್ರೆಸಗ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಯತೀಂದ್ರ, ರೈತರ ಮೇಲೆ ಜೀಪ್ ಹರಿಸಿದವರನ್ನು ಬಂಧಿಸೋಕೆ ಐದು ದಿನ ಆಯ್ತು.. ಕಾಂಗ್ರೆಸ್ ಪ್ರತಿಭಟನೆ ಬಳಿಕ ಅರೆಸ್ಟ್ ಮಾಡಲಾಯಿತು ಟೀಕಿಸಿದರು.
ಮುಂಬೈ ಸಮುದ್ರ ತೀರದ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಾಯಕ ಶಾರುಖ್ ಖಾನ್ ಪುತ್ರನನ್ನು ಎನ್ಸಿಬಿ ಬಂಧಿಸಿದ್ದು, ಆತನ ಬಂಧನದ ಬಗ್ಗೆ ನಟಿ ರಮ್ಯಾ ಅನುಮಾನ ವ್ಯಕ್ತಪಡಿಸಿರುವ ಬೆನ್ನಲ್ಲೇ, ಈಗ ಶಾಸಕ ಯತೀಂದ್ರ ಸಿದ್ದರಾಮಯ್ಯ ಕೂಡಾ ಸಾಫ್ಟ್ ಕಾರ್ನರ್ ಪ್ರದರ್ಶಿಸಿರುವುದನ್ನು ಗಮನಿಸಿದರೆ, ಕಾಂಗ್ರೆಸ್ ನ ಮಾನಸಿಕತೆಯನ್ನು ಸಂಶಯದಿಂದ ನೋಡುವಂತಾಗಿದೆ.