ಬೆಂಗಳೂರು : ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಮನೆ ಮುಂದೆ ನಿಲ್ಲಿಸಿದ್ದ ದುಬಾರಿ ಬೆಲೆಯ ಎರಡು ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಸಾಗರ್ ಥಾಪ ಹಾಗೂ ಬೆಂಗಳೂರಿನ ಶ್ರೀಧರ್ ಗೌಡ ಮತ್ತು ನವೀನ್ ಕಾಳಪ್ಪ ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ.
ಶಾಸಕರ ಶ್ರೀಮಂತಿಕೆಯನ್ನು ಅರಗಿಸಿಕೊಳ್ಳಲಾಗದೆ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಶ್ರೀಮಂತರು ಎಂದಿಗೂ ಶ್ರೀಮಂತರಾಗಿಯೇ ಇರುತ್ತಾರೆ, ಆದರೆ ಬಡವರು ಯಾವಾಗಲೂ ಬಡತನದಲ್ಲೇ ಜೀವನ ನಡೆಸಬೇಕು ಎಂಬ ಕೋಪದಿಂದ ಕಾರುಗಳಿಗೆ ಬೆಂಕಿ ಹಚ್ಚುವ ದುಷ್ಕೃತ್ಯಕ್ಕೆ ಬಂಧಿತರು ಕೈಹಾಕಿದ್ದಾರೆ. ಸಾಗರ್ ಥಾಪ ತನ್ನ ಜೊತೆಗಿದ್ದ ಶ್ರೀಧರ್ ಗೌಡ ಹಾಗೂ ನವೀನ್ಗೆ ಮದ್ಯ ಕುಡಿಸಿ ಕೃತ್ಯವೆಸಗಿಸಿದ್ದ ಎಂದು ತಿಳಿದುಬಂದಿದೆ.ಆಗಸ್ಟ್ 11ರ ರಾತ್ರಿ ದುಷ್ಕರ್ಮಿಗಳು ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದರು. ಬೆಂಕಿ ಹಚ್ಚಿದ ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಪ್ರಕರಣ : ಮೂವರು ಆರೋಪಿಗಳ ಬಂಧನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.