ಬೆಂಗಳೂರು : ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಬೇಕು. ಪ್ರಾಥಮಿಕ ಹಾಗೂ ಸೆಂಕಡರಿ ಎಜುಕೇಶನ್ ಬಗ್ಗೆ ಕಮಿಟಿ ಮಾಡಿ ಇಂಪ್ಲೆಮೆಂಟ್ ಮಾಡಲಿದ್ದೇವೆ. ಯಾರೂ ಗೊಂದಲ ಆಗುವ ಅವಶ್ಯಕತೆ ಇಲ್ಲ. ಚರ್ಚೆಗೆ ನಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
.ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಇದೊಂದು ಕ್ರಾಂತಿಕಾರಕ ಬದಲಾವಣೆ. ಪ್ರಸ್ತುತ ಕಾಲಕ್ಕೆ ಶಿಕ್ಷಣ ನೀಡಿ, ಒಳ್ಳೆಯ ಭವಿಷ್ಯ ನೀಡಬೇಕು ಎಂಬ ಗುರಿ ಇದೆ.
ವಿದ್ಯಾರ್ಥಿಗಳಲ್ಲಿ ಅರಿವು ಮೂಡಸುವ ಕೆಲಸ ಮಾಡಬೇಕಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಲ್ಲಿ ಅಳವಡಿಸೋ ಬಗ್ಗೆ ಸಮಿತಿ ರಚಿಸುತ್ತೇವೆ ತಿಳಿಸಿದರು.
ಕೆಆರ್ ಸರ್ಕಲ್ ನಲ್ಲಿ ವಿಶ್ವೇಶ್ವರಯ್ಯ ಪ್ಲಾಜಾ ಮಾಡಿದ್ದೇವೆ. ಇಲ್ಲಿ ಲೈಬ್ರರಿ, ಭಿತ್ತಿಚಿತ್ರ ಅಳವಡಿಸಲಾಗಿದೆ. ಇಲ್ಲಿ ಜನ ಸರ್ಎಂವಿ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು. ಇದೇ ಮಾದರಿಯಲ್ಲಿ ಬೆಂಗಳೂರಿನ 30 ಸರ್ಕಲ್ ಅಭಿವೃದ್ಧಿ ಮಾಡ್ತೀವಿ ಎಂದು ಭರವಸೆ ನೀಡಿದರು.