ರೀಸರ್ಚ್ ಆ್ಯಂಡ್ ಡಿವಲಪ್ಮೆಂಟ್ (ಸಂಶೋಧನೆ ಮತ್ತು ಅಭಿವೃದ್ಧಿ). ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕಾರ್ಯಕ್ರಮವೊಂದರಲ್ಲಿ ಈ ಅಂಶಕ್ಕೆ ಒತ್ತುನೀಡಿ ಮಾತನಾಡಿದ ಬೆನ್ನಲ್ಲೇ ಮಂಗಳವಾರ ಆರೋಗ್ಯ ಸಚಿವ ಕೆ ಸುಧಾಕರ್ ಸಹ ವಿಶ್ವವಿದ್ಯಾಲಯಗಳು ಸಂಶೋಧನೆ ಹೆಚ್ಚು ಮಾಡಬೇಕಾದ ಅಗತ್ಯದ ಬಗ್ಗೆ ಮಾತನಾಡಿದ್ದಾರೆ.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹೊಸ ಡಿಜಿಟಲ್ ಕಲಿಕೆ ವ್ಯವಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು ಹೇಳಿದ್ದು- “ನಮಗಿವತ್ತು ಕೋವಿಡ್ ವಿರುದ್ಧ ಲಸಿಕೆ ಕೊಟ್ಟಿರುವುದು ಆಕ್ಸ್ಫರ್ಡ್ ವಿಶ್ವವಿದ್ಯಾಲಯ.
ಇದು ಸಂಶೋಧನೆಯ ಮಹತ್ವ ಹೇಳುತ್ತದೆ. ವೈದ್ಯಕೀಯ ಕಾಲೇಜುಗಳು ಬಹಳಷ್ಟಿವೆ. ಆದರೆ ಗುಣಮಟ್ಟದ ಬೋಧನೆ ಮತ್ತು ಕಲಿಕೆಗೆ ಪ್ರಾಶಸ್ತ್ಯ ಸಿಗಬೇಕು. ವೈದ್ಯರಾಗಬೇಕು ಎಂದು ಹೇಳುವವರು ಬಹಳ, ಆದರೆ ವೈದ್ಯಕೀಯ ಸಂಶೋಧನೆಗಳಲ್ಲಿ ತೊಡಗಿಕೊಳ್ಳುವವರು ಕಡಿಮೆ. ಇದು ಬದಲಾಗಬೇಕಿದೆ.”
ಸರ್ಕಾರಿ ಆರೋಗ್ಯ ಸಂಸ್ಥೆಗಳೆಲ್ಲ ಜಯದೇವ ರೀತಿಯಲ್ಲಿ ಸೇವಾಕ್ಷಮತೆ ರೂಢಿಸಿಕೊಳ್ಳಬೇಕೆಂದು ಆಶಿಸಿದ ಸಚಿವರು, ಜಿಲ್ಲಾಹಂತಗಳಲ್ಲಿ ಆರೋಗ್ಯ ವ್ಯವಸ್ಥೆಗಳ ಸುಧಾರಣೆಗೆ ಸರ್ಕಾರ ಬದ್ಧವಾಗಿರುವುದಾಗಿ ಹೇಳಿದ್ದಾರೆ.