News Karnataka Kannada
Sunday, May 05 2024
ಬೆಂಗಳೂರು

ಸದನದಲ್ಲಿ ಗದ್ದಲ ಎಬ್ಬಿಸಿದ ರೋಹಿಣಿ ಸಿಂಧೂರಿ ಪ್ರಕರಣ

Rohini Sindhuri
Photo Credit :

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್‌ನ ಸದಸ್ಯರು ಸದನದಲ್ಲಿ ಕೆಲಕಾಲ ಧರಣಿ ನಡೆಸಿದರು.

ಶಾಸಕ ಸಾ.ರಾ.ಮಹೇಶ್‌ ಹಕ್ಕುಚ್ಯುತಿ ಪ್ರಸ್ತಾವನೆಗೆ ಅವಕಾಶ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಹೇಳಿದರು. ಬುಧವಾರ ಶೂನ್ಯವೇಳೆ ಬಳಿಕ ವಿಷಯ ಪ್ರಸ್ತಾಪಿಸಿದ ಸಾ.ರಾ.ಮಹೇಶ್‌, ಬ್ಯಾಗ್‌ ಖರೀದಿ ಸೇರಿದಂತೆ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿಗಳು ದೊಡ್ಡಮಟ್ಟದಲ್ಲಿ ಹಣ ದುರುಪಯೋಗ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿದ್ದಾರೆ ಎಂದು ಹೇಳಿದರು .

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಅಥವಾ ಶುಕ್ರವಾರ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದರು.

ಇದಕ್ಕೆ ಒಪ್ಪದ ಮಹೇಶ್‌ ಬಾವಿಗಿಳಿದು ಧರಣಿ ಆರಂಭಿಸಿದರು. ಅವಕಾಶ ನೀಡುವುದಾಗಿ ಹೇಳಿದ್ದರೂ ಜೆಡಿಎಸ್‌ ಸದಸ್ಯರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಸ್ಪೀಕರ್‌ ಹೇಳಿದ ಬಳಿಕ ಧರಣಿ ಕೈಬಿಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು