ಬೆಂಗಳೂರು: ಅಧಿವೇಶನದ ಕಲಾಪಗಳಿಗೆ ಅಡ್ಡಿಪಡಿಸಿ ಸದನದ ಸಮಯ ಹಾಳು ಮಾಡುತ್ತಿರುವ ಸದಸ್ಯರ ಪಟ್ಟಿ ಸಿದ್ದವಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಎಚ್ಚರಿಸಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು.
ಶೂನ್ಯವೇಳೆಯಲ್ಲಿ ಜೆಡಿಎಸ್ ಸದಸ್ಯರಾದ ಶಿವಲಿಂಗೇಗೌಡ, ಅನ್ನದಾನಿ, ಬಂಡೆಪ್ಪ ಕಾಶಂಪೂರ್ ಮತ್ತಿತರರು ಎದ್ದು ವಿಷಯ ಪ್ರಸ್ತಾಪಿಸಲು ಅವಕಾಶ ಮಾಡಿಕೊಡಬೇಕು ಎಂದು ಪಟ್ಟು ಹಿಡಿದಾಗ ಸ್ಪೀಕರ್ ಕಾಗೇರಿ ಗರಂ ಆದರು.