ಬೆಂಗಳೂರು : ಸುಳ್ಳು ಮಾಹಿತಿ ನೀಡಿ ಅಕ್ರಮವಾಗಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ಪಡೆದಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.
ಪಡಿತರ ಚೀಟಿ ಪಡೆಯಲು ಅನರ್ಹರಿದ್ದರೂ ಆಹಾರ ಇಲಾಖೆಗೆ ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಪಡೆದು ದುರುಪಯೋಗಪಡಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ನಿಯಮಗಳನ್ವಯ ನೋಟಿಸ್ ನೀಡಲಾಗಿದ್ದು, ಈ ನೋಟಿಸ್ ತಲುಪಿದ 1 ವಾರದೊಳಗೆ ಲಿಖಿತ ಸಮಜಾಯಿಷಿ ನೀಡದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಇನ್ನು ಸರ್ಕಾರಿ ಮತ್ತು ಅರೆ ಸರ್ಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಮತ್ತು ವೃತ್ತಿ ತೆರಿಗೆ ಪಾವತಿದಾರರೂ ಸೇರಿ ಆರ್ಥಿಕ ಸಬಲರು ನಕಲಿ ದಾಖಲೆಗಳನ್ನು ನೀಡಿ ಪಡೆದಿರುವ ಕಾರ್ಡ್ ಗಳನ್ನು ಆಯಾ ತಾಲೂಕು ಕಚೇರಿಗೆ ಹಿಂದಿರುಗಿಸಬೇಕು. ಒಂದು ವೇಳೆ ಕಾರ್ಡ್ ವಾಪಸ್ ನೀಡದಿದ್ದರೆ ಸರ್ಕಾರೇ ಪತ್ತೆ ಮಾಡಲಿದ್ದು, ಪಡಿತರ ಪಡೆದ ದಿನದಿಂದ ಈವವರೆಗೆ ಪಡೆದ ಆಹಾರ ಪದಾರ್ಥಗಳಿಗೆ ಕೆ.ಜಿ.ಗೆ 35 ರೂ. ದಂಡ ವಸೂಲಿ ಮಾಡಲಾಗುತ್ತದೆ ಎನ್ನಲಾಗಿದೆ.