ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳ ಸಭೆ-ಸಮಾರಂಭಗಳಲ್ಲಿ ಇನ್ನು ಮುಂದೆ ಹಾರ-ತುರಾಯಿಗಳನ್ನು ಸನ್ಮಾನಗಳಿಗೆ ಬಳಸದೆ ಬದಲಾಗಿ ಕನ್ನಡ ಪುಸ್ತಕಗಳನ್ನು ಕಾಣಿಕೆ ರೂಪದಲ್ಲಿ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಈ ಸೂಚನೆಯನ್ನು ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಸರ್ಕಾರದ ಅಧೀನದ ಎಲ್ಲಾ ಅಧಿಕಾರಿಗಳು ಪಾಲಿಸಬೇಕೆಂದು ಸರ್ಕಾರದ ಆದೇಶ ತಿಳಿಸಿದೆ.
ಇನ್ನು ಮುಂದೆ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ನೀಡಿ ಅನಗತ್ಯ ಖರ್ಚು ಮಾಡುವ ಬದಲು ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.