ಸಲೀಂ ಅವರು ಆಡಿದ ಕೆಲ ಮಾತುಗಳಿಂದ ಮುಜುಗರ ಆಗಿದ್ದು ನಿಜ. ಆದರೆ ಅವರ ಆರೋಪಕ್ಕೂ ನನಗೂ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ನಾನು ಯಾವ ಪರ್ಸಂಟೇಜ್ ವಿಚಾರದಲ್ಲಿ ಭಾಗಿಯಾಗಿಲ್ಲ.ಸಲೀಂ ಮಾತನಾಡಿರುವ ವಿಚಾರ ಕಾಂಗ್ರೆಸ್ ಪಕ್ಷಕ್ಕೂ, ನನಗೂ ಸಂಬಂಧಿಸುವುದಿಲ್ಲ ಎಂದರು.
ಸಲೀಂ ಹೇಳಿಕೆಯಿಂದ ಮುಜುಗರ ಆಗಿಲ್ಲ ಎಂದು ಹೇಳುವುದಿಲ್ಲ, ಮಾತನಾಡಿದ್ದಾರೆ, ರೆಕಾರ್ಡ್ ಕೂಡ ಇದೆ ಎಂದರು. ಉಗ್ರಪ್ಪ ಅವರು ಈಗಾಗಲೇ ಉತ್ತರ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ ಎಂದರು.
ಸಲೀಂ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಆಗಿದೆ, ಮುಜುಗರ ಆಗಿದ್ದಕ್ಕೆ ನಾನು ಇಲ್ಲಿ ಮಾತನಾಡುತ್ತಿದ್ದೇನೆ. ಹೇಳಿಕೆ ನೀಡಿದ ಸಲೀಂ ವಿರುದ್ಧ ಪಕ್ಷದ ಶಿಸ್ತು ಸಮಿತಿ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿದೆ ಎಂದರು.
ಸಿದ್ದರಾಮಯ್ಯ ಅವರ ಜೊತೆ ಜಗಳವೂ ಇಲ್ಲ ಏನೂ ಇಲ್ಲ. ನಾನು ಯಾವುದೇ ಗುಂಪುಗಾರಿಕೆ ನಡೆಸುವವನಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿಲ್ಲ ಎಂದರು.
ನಾನು ಹಳ್ಳಿಯಿಂದ ಬಂದವನು. ನನ್ನ ಬಾಡಿ ಲ್ಯಾಂಗ್ವೇಜ್ ಬದಲಾವಣೆ ಮಾಡಲು ಸಾಧ್ಯವಿಲ್ಲ. ನನ್ನದೇ ಆದ ಶೈಲಿ ಇದೆ, ನನ್ನದೇ ಆದ ವ್ಯಕ್ತಿತ್ವ, ನನ್ನದೇ ಆದ ನಡತೆ, ನನ್ನದೇ ಆದ ಯಶಸ್ಸು ಇದೆ ಎಂದರು.
ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…
ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…
ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…
ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…
ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…