ಬೆಂಗಳೂರು: ತಮ್ಮ ಮನೆಯ ಮುದ್ದಿನ ನಾಯಿ ಸಾವಿಗೀಡಾಗಿರುವುದಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ದುಃಖಿತರಾಗಿದ್ದಾರೆ.
ಸಾಕು ನಾಯಿ ʻಸನ್ನಿʼ ವಯೋಸಹಜವಾಗಿ ಸೋಮವಾರ ಬೆಳಿಗ್ಗೆ ಮೃತಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ʻಇಂದು ನಮ್ಮ ಮನೆಯ ಮುದ್ದಿನ ನಾಯಿ ʻಸನ್ನಿʼ ವಯೋಸಹಜದಿಂದ ಸಾವನ್ನಪ್ಪಿರುವುದು ತೀವ್ರ ದುಃಖ ತಂದಿದ್ದು ಕುಟುಂಬದ ಓರ್ವ ಸದಸ್ಯನನ್ನು ಕಳೆದುಕೊಂಡಂತಾಗಿದೆ. ಮನೆಯ ಹಾಗೂ ಮನೆಗೆ ಬರುವ ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುತ್ತಿತ್ತುʼ ಎಂದು ಟ್ವೀಟ್ ಮಾಡಿದ್ದಾರೆ.