ಬೆಂಗಳೂರು: ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವ ಬಿ ಶ್ರೀರಾಮುಲು ಅವರನ್ನು ಕರ್ನಾಟಕ ರಾಷ್ಟ್ರೀಯ ರಸ್ತೆ ಸಾರಿಗೆ ನೌಕರ ನಿರ್ಮಾಣ ಸಹಕಾರ ಸಂಘದ ಪದಾಧಿಕಾರಿಗಳು ಭೇಟಿ ಮಾಡಿದರು. ಈ ವೇಳೆ ಕೆ.ಎಚ್.ಬಿ ವತಿಯಿಂದ ಸಂಘದ ಸದಸ್ಯರಿಗೆ ನೆಲಮಂಗಲ ಸಮೀಪ ನಿರ್ಮಿಸಲು ಉದ್ದೇಶಿಸಿರುವ ಬಡಾವಣೆ ಕುರಿತು ವಿಸ್ತೃತ ಚರ್ಚೆ ನಡೆಸಿದರು. ಈ ಕುರಿತ ಎಲ್ಲಾ ತೊಡುಕುಗಳನ್ನ ಆದ್ಯತೆ ಮೇರೆಗೆ ಬಗೆಹರಿಸಿ, ಸಂಘಕ್ಕೆ ಯಾವುದೇ ಆರ್ಥಿಕ ಹೊರೆ ಆಗದಂತೆ, ಬಡಾವಣೆಯನ್ನು ಮುಂದಿನ ಪ್ರಕ್ರಿಯೆಗೆ ಅನುವು ಮಾಡಿಕೊಡುವಂತೆ ಬಿ.ಎಂ.ಆರ್.ಡಿ.ಎ ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.
ಇನ್ನೂ ಸಿಬ್ಬಂದಿಯ ಹಿತಾಸಕ್ತಿಯೇ ನಮ್ಮ ಆದ್ಯತೆ. ಶೀಘ್ರದಲ್ಲೇ ನೌಕರರಿಗೆ ನಿವೇಶನ ಹಂಚಿಕೆಯ ಪ್ರಕ್ರಿಯೆ ಆರಂಭ ಆಗುವ ಭರವಸೆ ಇದೆ ಎಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಹಲವು ಮುಖಂಡರು ಉಪಸ್ಥಿತರಿದ್ದರು.